Advertisement

ಉಳ್ಳಾಲ ಉರೂಸ್‌: ಬೃಹತ್‌ ತೊಟ್ಟಿಲು ತುಂಡಾಗಿ ನಾಲ್ವರು ಮಕ್ಕಳಿಗೆ ಗಾಯ

01:57 AM Feb 23, 2022 | Team Udayavani |

ಉಳ್ಳಾಲ: ಉಳ್ಳಾಲದಲ್ಲಿ ನಡೆಯುತ್ತಿರುವ ಪಂಚವಾರ್ಷಿಕ ಉರೂಸ್‌ ಕಾರ್ಯಕ್ರಮದಲ್ಲಿ ಭೃಹತ್‌ ತೊಟ್ಟಿಲು ತುಂಡಾಗಿ ನಾಲ್ವರು ಮಕ್ಕಳು ಗಾಯಗೊಂಡಿರುವ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ.

Advertisement

ಉರೂಸ್‌ ಪ್ರಯುಕ್ತ ದರ್ಗಾ ಸಂದರ್ಶನಕ್ಕೆಂದು ಬಂದಿದ್ದ ಕೇರಳ ಮೂಲದ ಕುಟುಂಬದ ನಾಲ್ವರು ಮಕ್ಕಳು ಸಂತೆಯಲ್ಲಿದ್ದ ಬೃಹತ್‌ ತೊಟ್ಟಿಲಿನಲ್ಲಿ ಕುಳಿತಿದ್ದರು. ಏಕಾಏಕಿ ವ್ಹೀಲ್‌ ಜಾಯಿಂಟ್‌ ತಪ್ಪಿದ ಪರಿಣಾಮ ನಾಲ್ವರು ಮಕ್ಕಳು ಕೆಳಕ್ಕೆ ಬಿದ್ದು ಗಾಯಗೊಂಡಿದ್ದಾರೆ.

ಘಟನೆಯಿಂದ ಕೆಲಕಾಲ ಸ್ಥಳದಲ್ಲಿ ಜನ ಜಮಾಯಿಸಿ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಗಾಯಾಳು ಮಕ್ಕಳನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕಾಗಮಿಸಿದ ಉಳ್ಳಾಲ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

 

Advertisement

Udayavani is now on Telegram. Click here to join our channel and stay updated with the latest news.

Next