Advertisement

Ullal ಶಂಕಿತ ಡೆಂಗ್ಯೂ: ಹರೇಕಳ ನಿವಾಸಿ ಸಾವು

12:59 AM Dec 23, 2023 | Team Udayavani |

ಉಳ್ಳಾಲ: ಶಂಕಿತ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಹರೇಕಳ ನ್ಯೂಪಡ್ಪು ಮೂಲದ ಪ್ರಸ್ತುತ ಮಂಜನಾಡಿ ಗ್ರಾಮದ ಉರುಮಣೆಯಲ್ಲಿ ವಾಸಿಸುತ್ತಿದ್ದ ನವಾಝ್ (32) ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

Advertisement

ಮಂಗಳೂರಿನ ಬಂದರು ಪ್ರದೇಶದಲ್ಲಿರುವ ಖಾಸಗಿ ಫಿಶರೀಸ್‌ ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ನವಾಝ್ ಮೂರು ನಾಲ್ಕು ದಿನಗಳಿಂದ ಜ್ವರದಿಂದ ಬಳಲುತ್ತಿದ್ದರು. ಸ್ಥಳೀಯ ವೈದ್ಯರಿಂದ ಚಿಕಿತ್ಸೆ ಪಡೆದಿದ್ದ ಅವರಿಗೆ ಗುರುವಾರ ಜ್ವರ ಉಲ್ಬಣಗೊಂಡಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು.

ಹರೇಕಳ ನ್ಯೂಪಡ್ಪುವಿನಲ್ಲಿ ಹೊಸಮನೆ ಕಾಮಗಾರಿ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಮಂಜನಾಡಿ ಗ್ರಾಮದ ಉರುಮನೆಯಲ್ಲಿ ತಾಯಿ, ಪತ್ನಿ, 1 ವರ್ಷದ ಮಗುವಿನೊಂದಿಗೆ ವಾಸವಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next