Advertisement

ಉಳ್ಳಾಲ: ಬ್ರೇಕ್ ಫೇಲ್‌ಗೊಳಗಾದ ಬಸ್‌ ಕಾರಿಗೆ ಢಿಕ್ಕಿ

01:49 PM Aug 28, 2022 | Team Udayavani |

ಉಳ್ಳಾಲ: ಬ್ರೇಕ್ ಫೇಲ್‌ಗೊಳಗಾದ ಬಸ್‌ ಕಾರಿಗೆ ಢಿಕ್ಕಿ ಹೊಡೆದ ಘಟನೆ ತೊಕ್ಕೊಟ್ಟು ಜಂಕ್ಷನ್‌ನಲ್ಲಿ ಭಾನುವಾರ ಸಂಭವಿಸಿದ್ದು, ಬಸ್‌ ಚಾಲಕನ ಸಮಯ ಪ್ರಜ್ಞೆಯಿಂದ  21 ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

Advertisement

ಮಂಗಳೂರಿನಿಂದ ಮುಡಿಪು ಕಡೆಗೆ ತೆರಳುತ್ತಿದ್ದ ಎನ್.ಎಸ್ ಟ್ರಾವೆಲ್ಸ್ ಬಸ್ಸು ತೊಕ್ಕೊಟ್ಟು ಬಸ್ ನಿಲ್ದಾಣಕ್ಕೆ ಹೋಗಬೇಕಾಗಿತ್ತು. ಆದರೆ ಬ್ರೇಕ್ ಫೇಲ್ ಆದ ಕಾರಣ ನೇರ ತೊಕ್ಕೊಟ್ಟು ಜಂಕ್ಷನ್‌ಗೆ ಬಸ್ಸನ್ನು ಚಲಾಯಿಸಿದ್ದು, ಈ ವೇಳೆ ಉಳ್ಳಾಲದಿಂದ ಮುಡಿಪುವಿನತ್ತ ತೆರಳುತ್ತಿದ್ದ ಕಾರಿಗೆ ಢಿಕ್ಕಿ ಹೊಡೆದಿದೆ. ಜನದಟ್ಟಣೆ ಹೆಚ್ಚಿರುವ ತೊಕ್ಕೊಟ್ಟು ಜಂಕ್ಷನ್‌ನಲ್ಲಿ  ಸಂಭಾವ್ಯ ಅನಾಹುತ ತಪ್ಪಿದೆ.

ಕಾರಿನಲ್ಲಿದ್ದ ಮುಡಿಪು ನಿವಾಸಿ ಮೊಹಮ್ಮದ್  ಮತ್ತು ಅವರ ಸಂಬಂಧಿ ಪ್ರಯಾಣಿಕ  ಅಪಾಯವಿಲ್ಲದೆ ಪಾರಾಗಿದ್ದಾರೆ. ಘಟನೆಯ ಪರಿಣಾಮ ಕಾರಿನ ಒಂದು ಭಾಗ ಸಂಪೂರ್ಣ ನುಜ್ಜುಗುಜ್ಜಾಗಿದೆ.

ಇದನ್ನೂ ಓದಿ:ಮುರುಘಾ ಶ್ರೀಗಳ ವಿರುದ್ಧ ಕೇಳಿ ಬಂದಿರುವ ಆರೋಪ ಸುಳ್ಳು: ಬಿಎಸ್‌ ವೈ

ಜೆಪ್ಪು ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next