Advertisement

ಉಳ್ಳಾಲ: ಬೈಕ್‌ಗೆ ಮೀನಿನ ಲಾರಿ ಢಿಕ್ಕಿ; ಸ್ಥಳದಲ್ಲೇ ಮೃತಪಟ್ಟ ಬೈಕ್‌ ಸವಾರ

05:10 PM Sep 16, 2022 | Team Udayavani |

ಉಳ್ಳಾಲ:  ಮೀನಿನ ಲಾರಿ ಬೈಕ್ ನ ಹಿಂಬದಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕುಂಪಲ ಬೈಪಾಸ್ ನಲ್ಲಿ ನಡೆದಿದೆ.

Advertisement

ಕಾಸರಗೋಡು ನೀರ್ಚಾಲ್ ಮಾನ್ಯ ನಿವಾಸಿ ನಿತಿನ್ ಎಂ. ಡಿ. ಮೃತ ದುರ್ದೈವಿ.

ಇದನ್ನೂ ಓದಿ:ಬಿಜೆಪಿ ಸೇರ್ಪಡೆಯಾಗಲಿರುವ ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್

ಮಂಗಳೂರು ಕಡೆಯಿಂದ ಕುಂಬಳೆ ಕಡೆಗೆ ಬೈಕಿನಲ್ಲಿ ತೆರಳುವ ಸಂದರ್ಭ , ಕುಂಪಲ ಬೈಪಾಸ್ ರಾ.ಹೆ.ಯಲ್ಲಿ ಇಡಲಾದ ಬ್ಯಾರಿಕೇಡ್ ತಪ್ಪಿಸುವ ವೇಳೆ ಹಿಂಬದಿಯಿಂದ ಮಲ್ಪೆಯಿಂದ ಕಾಸರಗೋಡಿನತ್ತ ತೆರಳುತ್ತಿದ್ದ ಮೀನಿನ ಲಾರಿ ಢಿಕ್ಕಿ ಹೊಡೆದು ಸ್ಥಳದಲ್ಲೇ ಯುವಕ ಸಾವನ್ನಪ್ಪಿದ್ದಾನೆ.

ಕಾಸರಗೋಡಿನಲ್ಲಿ ಸೋಲಾರ್ ಕಂಪೆನಿಯಲ್ಲಿ ಕೆಲಸಕ್ಕಿದ್ದ ನಿತಿನ್ ತನ್ನ ಸ್ನೇಹಿತನ ಬೈಕ್ ನಲ್ಲಿ ಮಂಗಳೂರಿಗೆ ಆಗಮಿಸಿದ್ದು, ವಾಪಾಸ್ ಕಾಸರಗೋಡು ಕಡೆ ಹೋಗುವ ಸಂದರ್ಭದಲ್ಲಿ ಘಟನೆ ನಡೆದಿದೆ.

Advertisement

ಘಟನೆ ಮಂಗಳೂರು ದಕ್ಷಿಣ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಮೃತ ನಿತಿನ್ ಅವರು ತಂದೆ , ತಾಯಿ ಇಬ್ಬರು ಸಹೋದರರನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next