Advertisement

ಉಳ್ಳಾಲ: ಚೂರಿಯಿಂದ ಇರಿದು ಮಹಿಳೆಯ ಹತ್ಯೆ

09:33 AM Mar 17, 2023 | Team Udayavani |

ಉಳ್ಳಾಲ: ಮಹಿಳೆಯನ್ನು ಚೂರಿಯಿಂದ ಇರಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲದ ಕೋಟೆಪುರ ಬಸ್ ನಿಲ್ದಾಣದ ಸಮೀಪ ಮಾ.16ರ ಸಂಜೆ ವೇಳೆ ಬೆಳಕಿಗೆ ಬಂದಿದೆ.

Advertisement

ದೆಹಲಿ ಮೂಲದ 35-40 ರ ಹರೆಯದ ಮಹಿಳೆಯ ಹತ್ಯೆ ನಡೆದಿದೆ.  ಈಕೆ ಜತೆಗಿದ್ದ ಅದೇ ಊರಿನ ನಯೀಮ್ (35) ಎಂಬಾತ ತಲೆಮರೆಸಿಕೊಂಡಿದ್ದಾನೆ.

ಎರಡು ದಿನಗಳ ಹಿಂದೆ ಕೋಟೆಪುರಕ್ಕೆ ಬಂದಿದ್ದ ಜೋಡಿ, ಸ್ಥಳೀಯ ಸೆಲೂನ್ ಮಾಲೀಕರ ಮೂಲಕ ಬಾಡಿಗೆ ಮನೆಯನ್ನು ಸಂಪರ್ಕಿಸಿ ಹಮೀದ್ ಎಂಬವರ ಬಾಡಿಗೆ ಮನೆಯನ್ನು ಪಡೆದುಕೊಂಡಿದ್ದರು ಎಂದು ತಿಳಿದು ಬಂದಿದೆ.

ಮನೆಗೆ ಬರುವಾಗ ಬಟ್ಟೆ ವ್ಯಾಪಾರ ನಡೆಸುವವರು ಎಂದು ತಿಳಿಸಿದ್ದು, ಇನ್ನೇನು ಬಟ್ಟೆಗಳು ಬರಬೇಕಿದೆ ಎಂದು ತಿಳಿಸಿ ಮನೆಯಲ್ಲಿದ್ದರು. ಇಂದು ಸಂಜೆ ವೇಳೆ ಇಬ್ಬರೂ ಮನೆಯಿಂದ ಹೊರಬಾರದೇ ಇರುವುದನ್ನು ಗಮನಿಸಿ ಯುವಕನೋರ್ವ ಮನೆಯನ್ನು ಗಮನಿಸಿದಾಗ ಶೌಚಾಲಯದೊಳಗೆ ಮಹಿಳೆಯ ಮೃತದೇಹ ಚೂರಿಯಿಂದ ಇರಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next