Advertisement

ಉಳ್ಳಾಲ : ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದ ಆರೋಪಿ ಬಂಧನ

11:40 PM Jun 08, 2022 | Team Udayavani |

ಉಳ್ಳಾಲ : ನಾಟೆಕಲ್‌ ಆರೋಗ್ಯ ಕೇಂದ್ರಕ್ಕೆ ವೈದ್ಯಕೀಯ ತಪಾಸಣೆಗಾಗಿ ಕಳವು ಪ್ರಕರಣದ ಮೂವರು ಆರೋಪಿಗಳನ್ನು ಪೊಲೀಸರು ಕರೆತಂದಿದ್ದು, ಈ ಸಂದರ್ಭ ಓರ್ವ ಆರೋಪಿ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದು, ಬೆನ್ನಟ್ಟಿದ ಪೊಲೀಸ್‌ ಸಿಬ್ಬಂದಿ ಸಿನಿಮೀಯ ಶೈಲಿಯಲ್ಲಿ ಹಿಡಿದ ಘಟನೆ ಬುಧವಾರ ನಡೆದಿದೆ. ಪರಾರಿಯಾಗಲು ಯತ್ನಿಸಿದ ಆರೋಪಿ ಮುಹಮ್ಮದ್‌ ಮುಸ್ತಫಾನನ್ನು ಕೊಣಾಜೆ ಠಾಣೆ ಪೊಲೀಸ್‌ ಸಿಬಂದಿ ಎಂ.ಬಿ. ಅಸುಂಡಿ ಅವರು ಹಿಡಿದಿದ್ದಾರೆ.

Advertisement

ಚೇಳೂರು ಚೆಕ್‌ಪೋಸ್ಟ್‌ ಬಳಿ ಪಿಎಸ್‌ಐ ಯೋಗೇಶ್ವರ್‌ ಮತ್ತು ಸಿಬಂದಿ ಗಸ್ತಿನಲ್ಲಿದ್ದ ವೇಳೆ ಮೆಲ್ಕಾರ್‌ನಿಂದ ಸಜಿಪ ಕಡೆಗೆ ಹೋಗುತ್ತಿದ್ದ ಕಾರೊಂದನ್ನು ತಡೆದಿದ್ದಾರೆ. ತಪಾಸಣೆ ನಡೆಸಿದಾಗ ಕಾರಿನಲ್ಲಿ ಒಂದು ದನದ ಕರುವನ್ನು ಸಾಗಿಸುತ್ತಿರುವುದು ಬೆಳಕಿಗೆ ಬಂದಿದ್ದು, ಘಟನೆಗೆ ಸಂಬಂಧಿಸಿ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದರು.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲು ಮುಂದಾದ ಪೊಲೀಸರು ಪಿ.ಸಿ.ಆರ್‌. ವಾಹನದಲ್ಲಿ ನಾಟೆಕಲ್ಲಿನ ಆರೋಗ್ಯ ಕೇಂದ್ರಕ್ಕೆ ವೈದ್ಯಕೀಯ ತಪಾಸಣೆಗೆ ಕರೆ ತಂದಿದ್ದಾರೆ. ಈ ವೇಳೆ ಮುಸ್ತಫಾ ಪ್ರಾಥಮಿಕ ಆರೋಗ್ಯ ಕೇಂದ್ರದ ಸಮೀಪದ ಗುಡ್ಡ ಹಾರಿ ತಪ್ಪಿಸಲು ಯತ್ನಿಸಿದ್ದು, ಸ್ಥಳದಲ್ಲಿದ್ದ ಪೊಲೀಸ್‌ ಸಿಬಂದಿ ಎಂ.ಬಿ. ಅಸುಂಡಿ ಬೆನ್ನಟ್ಟಿ ಆರೋಪಿಯನ್ನು ಹಿಡಿದಿದ್ದಾರೆ. ಘಟನೆಯಲ್ಲಿ ಅಸುಂಡಿ ಅವರಿಗೆ ಗಾಯವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next