Advertisement

ಉಳ್ಳಾಲ: ಸಿಡಿಲು ಬಡಿಲು ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಾವು

10:45 PM Jun 11, 2022 | Team Udayavani |

ಉಳ್ಳಾಲ : ನಾಡ ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದ ಕಸಬಾ ಬೆಂಗರೆ ನಿವಾಸಿ ಹೈದರ್‌ ಆಲಿ (38) ಸಮುದ್ರದಲ್ಲಿರುವಾಗಲೇ ಸಿಡಿಲು ಬಡಿದು ಮೃತಪಟ್ಟ ಘಟನೆ ಶನಿವಾರ ಸಂಭವಿಸಿದೆ.

Advertisement

ಹೈದರಾಲಿ ಶನಿವಾರ ಬೆಳಗ್ಗೆ ತನ್ನ ಸಹವರ್ತಿಗಳಾದ ಆಸಿಫ್‌ ಎಚ್‌., ಫರಾಝ್, ಇಮ್ರಾನ್‌, ಮತ್ತು ಅನ್ವರ್‌ ಅವರೊಂದಿಗೆ ಬೆಳಗ್ಗೆ 5ಕ್ಕೆ ನಾಡದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಉಳ್ಳಾಲ ಕೋಡಿಯಿಂದ ಸುಮಾರು 14 ಮಾರು ದೂರದಲ್ಲಿ ಸುಮಾರು 7.30ರ ಹೊತ್ತಿಗೆ ತಲುಪಿದ್ದು, ಬಲೆ ಬೀಸುತ್ತಿದ್ದಾಗ ಸಿಡಿಲು – ಮಿಂಚು ಆರಂಭಗೊಂಡಿದ್ದು, ಹೈದರಾಲಿಗೆ ಸಿಡಿಲೊಂದು ಬಡಿದಿತ್ತು.

ಈ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಹೈದರಾಲಿಯನ್ನು ತತ್‌ಕ್ಷಣ ಸಹವರ್ತಿಗಳು ದೋಣಿಯಲ್ಲಿ ದಡಕ್ಕೆ ತಂದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದಾಗ ವೈದ್ಯರು ಮೃತಪಟ್ಟಿರುವುದನ್ನು ದೃಢೀಕರಿಸಿದ್ದಾರೆ. ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ಹೈದರಾಲಿ ತಾಯಿ, ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಇದನ್ನೂ ಓದಿ : ಕರಾವಳಿಯಲ್ಲೆಡೆ ಉತ್ತಮ ಮಳೆ; ಸಿಡಿಲಿಗೆ ಓರ್ವ ಸಾವು : ಜೂ.12ಕ್ಕೆ ಎಲ್ಲೋ ಅಲರ್ಟ್‌

Advertisement

Udayavani is now on Telegram. Click here to join our channel and stay updated with the latest news.

Next