Advertisement

ಉಳ್ಳಾಲ: ಡಿವೈಎಫ್ಐನಿಂದ ಹರೇಕಳ ಸೇತುವೆ ಗೇಟ್ ತೆರವು; ಸಂಚಾರಕ್ಕೆ ಮುಕ್ತ

10:38 AM Apr 04, 2023 | Team Udayavani |

ಉಳ್ಳಾಲ: ಹರೇಕಳದಿಂದ ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್ ಗೆ ನೇರ ಸಂಪರ್ಕ ಕಲ್ಪಿಸುವ ಸೇತುವೆಗೆ ಅಳವಡಿಸಲಾಗಿದ್ದ ಗೇಟುಗಳನ್ನು ಡಿವೈಎಫ್ಐ ಕಾರ್ಯಕರ್ತರು ಸಾರ್ವಜನಿಕರ ಸಹಕಾರದಲ್ಲಿ ಕಿತ್ತೆಸೆದು ಸಂಚಾರ ಮುಕ್ತಗೊಳಿಸಿದ್ದಾರೆ.

Advertisement

ನಾಲ್ಕು ತಿಂಗಳ ಹಿಂದೆಯೇ ಸೇತುವೆ ಕಾಮಗಾರಿ ಪೂರ್ಣಗೊಂಡಿದ್ದು, ಏಪ್ರಿಲ್ ಒಂದರಿಂದ ದ್ವಿಚಕ್ರ, ತ್ರಿಚಕ್ರ ಹಾಗೂ ನಾಲ್ಕು ಚಕ್ರಗಳ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗುತ್ತದೆ ಎಂದು ಹೇಳಲಾಗಿತ್ತು. ಸಣ್ಣ ನೀರಾವರಿ ಇಲಾಖೆ ಆದೇಶ ಸಿಗದೇ ಮತ್ತು ನ್ಯಾಯಾಲಯದಿಂದ ತಡೆಯಾಜ್ಞೆ ಇರುವ ಹಿನ್ನೆಲೆ ತೆರವುಗೊಳಿಸಲಾಗಿರಲಿಲ್ಲ.

ಈ ನಡುವೆ ಏ.3ರ ಸೋಮವಾರ ಅಧಿಕಾರಿಗಳೇ ಕುಂಬಳಕಾಯಿಯೊಂದಿಗೆ ಹರೇಕಳಕ್ಕೆ ಬಂದು ಸೇತುವೆ ಸಂಚಾರಕ್ಕೆ ಮುಕ್ತಗೊಳಿಸಲು ಮುಂದಾದರೂ ನೀತಿ ಸಂಹಿತೆಯಿಂದಾಗಿ ಹಿಂದೆ ಸರಿದಿದ್ದಾರೆ.

ಇದರಿಂದ ಬೇಸತ್ತ ಹರೇಕಳ ಡಿವೈಎಫ್ಐ ಘಟಕದಿಂದ ಸೋಮವಾರ ಜಿಲ್ಲಾಧಿಕಾರಿಗೆ ಮನವಿಯನ್ನು ಸಲ್ಲಿಸಲಾಗಿತ್ತು. ಇಂದು (ಏ.4) ಬೆಳಿಗ್ಗೆಯೇ ಡಿವೈಎಫ್ಐ ಮುಖಂಡರು, ಕಾರ್ಯಕರ್ತರು ಸ್ಥಳಕ್ಕೆ ಜಮಾಯಿಸಿ ಸಾರ್ವಜನಿಕರ ಸಹಕಾರದೊಂದಿಗೆ ಸೇತುವೆಯ ಎರಡೂ ಕಡೆಗಳಲ್ಲಿ ಅಳವಡಿಸಲಾಗಿದ್ದ ಗೇಟುಗಳನ್ನು ಕಿತ್ತೆಸೆದು ಸಾರ್ವಜನಿಕ ವಾಹನ ಸಂಚಾರಕ್ಕೆ ಮುಕ್ತಗೊಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next