Advertisement

ಉಳ್ಳಾಲ: ಮಗನ ಕಣ್ಣೆದುರೇ ಸಮುದ್ರ ಪಾಲಾದ ತಂದೆ, ಸ್ನಾನಕ್ಕೆ ನೀರಿಗಿಳಿದ ವೇಳೆ ಸಂಭವಿಸಿದ ಘಟನೆ

11:11 PM Dec 11, 2022 | Team Udayavani |

ಉಳ್ಳಾಲ: ಸೋಮೇಶ್ವರ ದೇವಸ್ಥಾನ ಬಳಿ ಸಮುದ್ರದ ಬಳಿ ಸಮುದ್ರಸ್ನಾನಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಸಮುದ್ರದ ಅಲೆಗೆ ಸಿಲುಕಿ ಮೃತಪಟ್ಟ ಘಟನೆ ಭಾನುವಾರ ಸಂಭವಿಸಿದೆ.

Advertisement

ಉಳ್ಳಾಲ ಕಾಪಿಕಾಡ್ ಬಳಿಯ ಅಂಬಿಕಾರೋಡ್ ನಿವಾಸಿ ಪ್ರಶಾಂತ್ ಬೇಕಲ್ (47) ಮೃತಪಟ್ಡವರು. ಪ್ರಶಾಂತ್ ಪುತ್ರ ಚಿರಾಯು ಬೇಕಲ್, ಸಹೋದರ ವರದರಾಜ್ ಬೇಕಲ್ ಅವರ ಪುತ್ರ ವಂದನ್ ಬೇಕಲ್, ಸಂಕೋಳಿಗೆಯ ಸ್ನೇಹಿತ ಮಣಿ ಎಂಬವರ ಜತೆಗೆ ತೆರಳಿದ್ದ ಸಂದರ್ಭ ಘಟನೆ ನಡೆದಿದೆ. ಪ್ರತಿ ಭಾನುವಾರವೂ ಮಕ್ಕಳನ್ನು ಕರೆದುಕೊಂಡು ಸಮುದ್ರ ತೀರಕ್ಕೆ ಸಹೋದರರು ತೆರಳುತ್ತಿದ್ದರು. ಮೃತ ಪ್ರಶಾಂತ್ ಅವರ ಪುತ್ರ ಚಿರಾಯು ಇಂಜಿನಿಯರಿಂಗ್ ವಿದ್ಯಾರ್ಥಿಯಾಗಿದ್ದು, ಈಜುಪಟುವಾಗಿದ್ದಾನೆ. ಕಣ್ಣಮುಂದೆಯೇ ತಂದೆ ಸಮುದ್ರಪಾಲಾಗುವುದನ್ನು ಕಂಡು ಹಗ್ಗದ ಸಹಾಯದಿಂದ ಮೇಲಕ್ಕೆ ಎತ್ತಿದರೂ ಪ್ರಯೋಜನಕಾರಿಯಾಗಲಿಲ್ಲ. ರಿಕ್ಷಾ ಚಾಲಕರಾಗಿದ್ದ ಪ್ರಶಾಂತ್ ಪ್ರಸ್ತುತ ಮಂಗಳೂರಿನ ಎಸ್ ಡಿಎಂ ಶಿಕ್ಷಣ ಸಂಸ್ಥೆಯ ಬಸ್ಸಿನಲ್ಲಿ ಚಾಲಕರಾಗಿದ್ದಾರೆ.

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮ್ಯಾಂಡಸ್ ಚಂಡಾಮಾರುತದ ಹಿನ್ನೆಲೆಯಲ್ಲಿ ಶನಿವಾರ ತಡರಾತ್ರಿಯಿಂದ ಮಳೆಯಿದ್ದು, ಸಮುದ್ರದಲ್ಲಿ ಗಾಳಿಯಿದ್ದ ಹಿನ್ನೆಲೆಯಲ್ಲಿ ಅಲೆಗಳ ಗಾತ್ರ ಹೆಚ್ಚಾಗಿ ಘಟನೆ ಸಂಭವಿಸಿರುವುದಾಗಿ ಸ್ಥಳೀಯರು ತಿಳಿಸಿದ್ದಾರೆ.

ಬಂಗಾಳಕೊಲ್ಲಿಯಲ್ಲಿನ ವಾಯುಭಾರ ಕುಸಿತ ತೀವ್ರಗೊಂಡು ಚಂಡಾಮಾರುತವಾಗಿ ಮಾರ್ಪಟ್ಟು, ಡಿ.೧೨ರವರೆಗೆ ಚಳಿ ಜತೆಗೆ ಮಳೆ ಇರುವ ಕುರಿತು ಹವಾಮಾನ ಇಲಾಖೆ ಎಚ್ಚರಿಕೆಯನ್ನು ನೀಡಿತ್ತು.

ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next