Advertisement

ಲಾರಿ-ಸ್ಕೂಟರ್‌ ಢಿಕ್ಕಿ: ಯುವಕ ಸಾವು

12:43 AM Feb 24, 2023 | Team Udayavani |

ಉಳ್ಳಾಲ: ಕೆಟ್ಟು ನಿಂತ ಲಾರಿಗೆ 2 ಸ್ಕೂಟರ್‌ಗಳು ಢಿಕ್ಕಿ ಹೊಡೆದು ಒಂದು ಸ್ಕೂಟರಿನಲ್ಲಿದ್ದ ಸವಾರ ಸಾವನ್ನಪ್ಪಿ ಸಹಸವಾರ ಗಂಭೀರ ಗಾಯಗೊಂಡು, ಇನ್ನೊಂದು ಸ್ಕೂಟರಿನಲ್ಲಿದ್ದ ಸವಾರ ಗಾಯಗೊಂಡ ಘಟನೆ ನೇತ್ರಾವತಿ ಸೇತುವೆಯಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದೆ. ಅಂಗರಗುಂಡಿ ನಿವಾಸಿ ಮೊಹಮ್ಮದ್‌ ನೌಫಾಲ್‌ (26) ಮೃತರು. ಸಹಸವಾರ ಉಮ್ಮರ್‌ ಫಾರೂಕ್‌ ಗಾಯಾಳು. ಇಬ್ಬರೂ ಕಲ್ಲಾಪು ಗ್ಲೋಬಲ್‌ ಮಾರುಕಟ್ಟೆಗೆ ತರಕಾರಿ ವ್ಯಾಪಾರದ ಹಿನ್ನೆಲೆಯಲ್ಲಿ ಪಂಪ್‌ವೆಲ್‌ ಕಡೆಯಿಂದ ತೊಕ್ಕೊಟ್ಟು ಕಡೆಗೆ ತೆರಳುತ್ತಿದ್ದ ಸಂದರ್ಭ ಘಟನೆ ಸಂಭವಿಸಿದೆ. ಒಂದು ಸ್ಕೂಟರ್‌ ಢಿಕ್ಕಿ ಹೊಡೆದ ಕೆಲವೇ ನಿಮಿಷಗಳಲ್ಲಿ ಇನ್ನೊಂದು ಸ್ಕೂಟರ್‌ ಕೂಡ ಢಿಕ್ಕಿ ಹೊಡೆದಿದೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್‌ ಠಾಣೆಯವರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next