Advertisement

ಉಳ್ಳಾಲ: ಹಾಡುಹಗಲೇ ಮನೆಗೆ ಕನ್ನ ಕೊರೆದು ಚಿನ್ನಾಭರಣ ದೋಚಿದ ಕಳ್ಳರು

09:42 AM Nov 30, 2019 | Naveen |

ಉಳ್ಳಾಲ: ಇಲ್ಲಿನ ಮನೆಯೊಂದಕ್ಕೆ ಶುಕ್ರವಾರ ಹಾಡು ಹಗಲಿನಲ್ಲೇ ನುಗ್ಗಿದ ಕಳ್ಳರು ಮನೆಯ ಒಳಗಿದ್ದ ಚಿನ್ನಾಭರಣಗಳನ್ನು ಕಳವು ಮಾಡಿರುವ ಘಟನೆ ವರದಿಯಾಗಿದೆ.  ತೊಕ್ಕೊಟ್ಟು ಒಳಪೇಟೆ ನಿವಾಸಿ ಭಾರತಿ ಕೊಟ್ಟಾರಿ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಮನೆಯ ಹೆಂಚು ತೆಗೆದು ಒಳ ನುಗ್ಗಿದ ಕಳ್ಳರು 2.5 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

Advertisement

ಭಾರತಿ ಅವರು ಉಳ್ಳಾಲ ಆರೋಗ್ಯ ಇಲಾಖೆಯಲ್ಲಿ ಆಶಾ ಕಾರ್ಯಕರ್ತೆಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರು ಇಂದು ಮಧ್ಯಾಹ್ನ ಉಳ್ಳಾಲ ದೇವಸ್ಥಾನಕ್ಕೆ ಭೇಟಿ ನೀಡಿ ಹಿಂತಿರುಗಿದಾಗ ತಮ್ಮ ಮನೆಯಲ್ಲಿ ಕಳವು ನಡೆದಿರುವುದು ತಿಳಿದು ಬಂದಿದೆ.

ಕಳ್ಳರು ಮನೆಯಲ್ಲಿದ್ದ ಚಿನ್ನದ ಉಂಗುರ, ಬ್ರಾಸ್ಲೇಟ್ ಸೇರಿದಂತೆ ಎಟಿಎಂ ಕಾರ್ಡ್ ಕಳವು ಮಾಡಿದ್ದಾರೆ. ವಿಚಿತ್ರವೆಂದರೆ ಇದು ಭಾರತಿ ಅವರ ಮನೆಯಲ್ಲಿ ನಡೆಯುತ್ತಿರುವ ಮೂರನೇ ಕಳ್ಳತನ ಪ್ರಕರಣವಾಗಿದೆ. ಸ್ಥಳಕ್ಕೆ ಉಳ್ಳಾಲ ಠಾಣಾ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next