Advertisement

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

09:06 PM Apr 23, 2024 | Team Udayavani |

ಉಳ್ಳಾಲ: ಸೋಮವಾರ ರಾತ್ರಿ ಊಟ ಮುಗಿಸಿ ಮಲಗಿದ್ದ ಕೊಲ್ಯ ಕನೀರುತೋಟ ನಿವಾಸಿ ಜಿತೇಶ್‌ (28) ಮಲಗಿದ್ದಲ್ಲೇ ಸಾವನ್ನಪ್ಪಿದ್ದು, ಹೃದಯಾಘಾತದಿಂದ ಸಾವು ಸಂಭವಿಸಿದೆ ಎಂದು ಶಂಕೆ ವ್ಯಕ್ತಪಡಿಸಲಾಗಿದೆ.

Advertisement

ವಿವಾಹಿತರಾಗಿದ್ದ ಜಿತೇಶ್‌ ಮಂಗಳೂರಿನ ಕೆಟಿಎಂ ಶೋರೂಂನಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಸೋಮವಾರ ರಾತ್ರಿ ಮನೆಮಂದಿಯೊಂದಿಗೆ ಊಟ ಮಾಡಿ ಮಲಗಿದ್ದ ಜಿತೇಶ್‌ ಬೆಳಗ್ಗೆ ಏಳದೆ ಇದ್ದಾಗ ಮನೆ ಮಂದಿ ಎಬ್ಬಿಸಲು ತೆರಳಿದ್ದು, ಈ ಸಂದರ್ಭ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

ಮೃತರು ತಂದೆ, ತಾಯಿ, ಪತ್ನಿ, ಸಹೋದರ ಹಾಗೂ ಸಹೋದರಿಯನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next