Advertisement

Ullal ಪುತ್ರನ ಆತ್ಮಹತ್ಯೆ ಕೊರಗಿನಲ್ಲಿ ತಂದೆಯೂ ಆತ್ಮಹತ್ಯೆ

11:58 PM Aug 15, 2023 | Team Udayavani |

ಉಳ್ಳಾಲ: ಕುಂಬಳೆ ಬಳಿಯ ಬಂಬ್ರಾಣ ಕಲ್ಕುಲ ನಿವಾಸಿ, ಮೇಸ್ತ್ರಿ ಕೆಲಸ ಮಾಡುತ್ತಿದ್ದ ಲೋಕೇಶ್‌ (52) ಎಂಬವರ ಮೃತದೇಹ ಸೋಮವಾರ ಬೆಳಗ್ಗೆ ಉಳ್ಳಾಲ ಕಡಲ ಕಿನಾರೆಯಲ್ಲಿ ಪತ್ತೆಯಾಗಿದೆ.
ಪುತ್ರ ರಾಜೇಶ್‌ (26) ಆತ್ಮಹತ್ಯೆ ಮಾಡಿದ 32 ದಿನಗಳ ಅಂತರದಲ್ಲಿ ತಂದೆಯೂ (ಲೋಕೇಶ್‌) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

Advertisement

ರಾಜೇಶ್‌ ಜು. 10ರಂದು ನಾಪತ್ತೆಯಾಗಿದ್ದು, ಬಳಿಕ ಅವರ ಮೃತದೇಹ 12ರಂದು ಬೆಳಗ್ಗೆ ಮಂಗಳೂರು ಬೆಂಗರೆ ನೇತ್ರಾವತಿ ನದಿ ತೀರದಲ್ಲಿ ಪತ್ತೆಯಾಗಿತ್ತು. ಮಗನ ಅಂತ್ಯಕ್ರಿಯೆ ಕಳೆದ ಬಳಿಕ ತಂದೆ ಲೋಕೇಶ್‌ ನೊಂದುಕೊಂಡಿದ್ದರು. ಅಲ್ಲದೆ ಮಗನ ಸಾವಿನ ಬಳಿಕ ಮಾನಸಿಕವಾಗಿ ಕುಗ್ಗಿ ಹೋಗಿದ್ದರು.

ಆ. 13ರಂದು ಬೆಳಗ್ಗೆ 9 ಗಂಟೆಯ ವೇಳೆ ಪರಿಸರದ ಕೆಲವು ಮಂದಿಗೆ ಲೋಕೇಶ್‌ ಅವರು ವಾಟ್ಸ್‌ಆ್ಯಪ್‌ ಸಂದೇಶ ಕಳುಹಿಸಿ “ನಾನು ಈಗ ಸೋಮೇಶ್ವರಕ್ಕೆ ಹೋಗಿ ಸಮುದ್ರಕ್ಕೆ ಹಾರುತ್ತೇನೆ. ನನ್ನ ಹೆಣ ಉಳ್ಳಾಲದಲ್ಲಿ ಸಿಗಬಹುದು ನಾನು ಮೊಬೈಲ್‌ ಕೊಂಡು ಹೋಗುವುದಿಲ್ಲ, ಮನೆಯಲ್ಲಿ ಇಟ್ಟು ಹೋಗುತ್ತೇನೆ’ ಎಂದು ಹೇಳಿ ಮನೆಯಿಂದ ತೆರಳಿದ್ದರು. ವಾಟ್ಸ್‌ ಆ್ಯಪ್‌ ಸಂದೇಶ ನೋಡಿದ ಕೂಡಲೇ ಪರಿಸರದವರು ಕರೆ ಮಾಡಿದಾಗ ಮನೆ ಮಂದಿ ಕಾಲ್‌ ರಿಸೀವ್‌ ಮಾಡಿದ್ದು, ಅವರು ಮೊಬೈಲ್‌ ಮನೆಯಲ್ಲಿ ಇಟ್ಟು ಹೊರ ಹೋದ ಬಗ್ಗೆ ಮಾಹಿತಿ ನೀಡಿದ್ದರು. ಕೂಡಲೇ ಈ ವಿಷಯವನ್ನು ಉಳ್ಳಾಲ ಠಾಣೆಗೆ ಮನೆಯವರು ಹಾಗೂ ಪರಿಸರ ನಿವಾಸಿಗಳು ತಿಳಿಸಿದ್ದರು.
ಲೋಕೇಶ್‌ರ ಮೃತದೇಹ ಉಳ್ಳಾಲದಲ್ಲಿ ಮೀನುಗಾರರಿಗೆ ಸಿಕ್ಕಿದೆ.

ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Advertisement

Udayavani is now on Telegram. Click here to join our channel and stay updated with the latest news.

Next