Advertisement

Davanagere ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಉಮಾ ಪ್ರಶಾಂತ್ ನೇಮಕ

07:41 PM Aug 22, 2023 | Team Udayavani |

ದಾವಣಗೆರೆ: ದಾವಣಗೆರೆ ಜಿಲ್ಲೆಯ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ಉಮಾ ಪ್ರಶಾಂತ್ ಅವರನ್ನು ಸರ್ಕಾರ ನಿಯೋಜನೆಗೊಳಿಸಿದೆ.

Advertisement

ಈಚೆಗೆ ಪೊಲೀಸ್ ವರಿಷ್ಠಾಧಿಕಾರಿ ಡಾ. ಕೆ. ಅರುಣ್ ಅವರನ್ನು ವರ್ಗಾವಣೆಗೊಳಿಸಿತ್ತು. ಅವರ ಸ್ಥಾನದಲ್ಲಿ  ಉಮಾ ಪ್ರಶಾಂತ್ ನಿಯೋಜನೆಗೊಂಡಿದ್ದಾರೆ.

ಡಾ. ಕೆ. ಅರುಣ್ ಏ. 23 ರಂದು ಜಿಲ್ಲಾ ರಕ್ಷಣಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. ಕೆಲವೇ ತಿಂಗಳಲ್ಲಿ ವರ್ಗಾವಣೆಗೊಂಡಿದ್ದು, ಸ್ಥಳ ನಿಯೋಜನೆ ಮಾಡಿಲ್ಲ. 2016ರ ಬ್ಯಾಚ್‌ನ ಉಮಾ ಪ್ರಶಾಂತ್ ಈ ಮೊದಲು ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ಯ ನಿರ್ವಹಿಸುತ್ತಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next