Advertisement

ಸಚಿವ ಉಮೇಶ ಕತ್ತಿ ನಿಧನ : ಬೆಳಗಾವಿ ಜಿಲ್ಲೆಯಾದ್ಯಂತ ಮಡುಗಟ್ಟಿದ ಶೋಕ

11:05 AM Sep 07, 2022 | Team Udayavani |

ಬೆಳಗಾವಿ : ಆಹಾರ ಸಚಿವ ಉಮೇಶ ಕತ್ತಿ ಅವರ ನಿಧನ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಶೋಕ ಮಡುಗಟ್ಟಿದ್ದು, ಇಡೀ‌ ಜಿಲ್ಲೆ ಶೋಕದಲ್ಲಿ ಮುಳುಗಿದೆ.

Advertisement

ಉಮೇಶ ಕತ್ತಿ ಅವರ ತವರೂರು ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಎಲ್ಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಲಿಂಗಾಯತ ಸಮುದಾಯದ ವಿಧಿ ವಿಧಾನಗಳಂತೆ ಅಂತ್ಯ ಸಂಸ್ಕಾರ ನಡೆಯಲಿದೆ. ಗ್ರಾಮದಲ್ಲಿ ಶೋಕ ಮಡುಗಟ್ಟಿದ್ದು, ಇಡೀ ಊರು ಸ್ಮಶಾನ ಮೌನವಾಗಿದೆ.

ಈಗಾಗಲೇ ಬೆಂಗಳೂರು ಎಚ್ ಎಎಲ್ ಏರ್ ಪೋರ್ಟ್ ದಿಂದ ಉಮೇಶ ಕತ್ತಿ ಅವರ ಪಾರ್ಥಿವ ಶರೀರ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಮಧ್ಯಾಹ್ನ 12 ಗಂಟೆ ಸುಮಾರಿಗೆ ಬರಲಿದೆ.

ಇದನ್ನೂ ಓದಿ : ಆಪ್ತ ಸ್ನೇಹಿತನ ಅಗಲಿಕೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ

Advertisement

Udayavani is now on Telegram. Click here to join our channel and stay updated with the latest news.

Next