ನವದೆಹಲಿ; ಕರ್ನಾಟಕದ ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಖಾತೆ ಸಚಿವ ಉಮೇಶ್ ಕತ್ತಿ(61ವರ್ಷ0 ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ (ಸೆ.07) ಸಂತಾಪ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಮಳೆಹಾನಿ: ಕೇಂದ್ರ ಮಾರ್ಗಸೂಚಿಯಂತೆ ನ್ಯಾಯಯುತ ಪರಿಹಾರ ಒದಗಿಸಲು ಕೇಂದ್ರ ತಂಡಕ್ಕೆ ಸಿಎಂ ಮನವಿ
“ಶ್ರೀ ಉಮೇಶ್ ಕತ್ತಿಜೀಯವರು ಅನುಭವಿ ಮುಖಂಡರಾಗಿದ್ದು, ಅವರು ಕರ್ನಾಟಕದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡಿದ್ದಾರೆ. ಅವರ ಅಗಲುವಿಕೆಯಿಂದ ನೋವಾಗಿದೆ. ಈ ದುಃಖದ ಸನ್ನಿವೇಶದಲ್ಲಿ ಅವರ ಕುಟುಂಬ ವರ್ಗಕ್ಕೂ ಮತ್ತು ಬೆಂಬಲಿಗರಿಗೆ ನೋವು ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಉಮೇಶ್ ಕತ್ತಿ ಅವರು ಮಂಗಳವಾರ(ಸೆ.06) ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದರು. ರಾತ್ರಿ ಶೌಚಾಲಯಕ್ಕೆ ತೆರಳಿದ್ದ ವೇಳೆ ಅಲ್ಲಿಯೇ ಕುಸಿದುಬಿದ್ದಿದ್ದು, ನಂತರ ಮನೆಯವರು ಹೋಗಿ ನೋಡಿದಾಗ, ಪ್ರಜ್ಞೆತಪ್ಪಿ ಬಿದ್ದಿರುವುದು ಗಮನಕ್ಕೆ ಬಂದಿತ್ತು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ವಿಧಿವಶರಾಗಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿದ್ದವು.