Advertisement

ಉಮೇಶ್ ಕೋಲ್ಹೆ ಹತ್ಯೆ ಪ್ರಕರಣ: ಎನ್‌ಐಎಗೆ ಹಸ್ತಾಂತರ

07:38 PM Jul 16, 2022 | Team Udayavani |

ಮುಂಬೈ: ಉದಯ್‌ಪುರಲ್ಲಿ ಟೈಲರ್‌ ಹತ್ಯೆಯ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳ(ಎನ್‌ಐಎ)ಕ್ಕೆ ಒಪ್ಪಿಸಿದ ಬೆನ್ನಲ್ಲೇ ಇದೀಗ ಮಹಾರಾಷ್ಟ್ರದ ಅಮರಾವತಿಯಲ್ಲಿ ರಾಸಾಯನಿಕಶಾಸ್ತ್ರಜ್ಞ ಉಮೇಶ್‌ ಕೊಲ್ಹೆ ಅವರ ಹತ್ಯೆ ಪ್ರಕರಣವನ್ನೂ ಎನ್‌ಐಎಗೆ ಹಸ್ತಾಂತರಿಸಲಾಗಿದೆ.

Advertisement

ಈ ಬಗ್ಗೆ ಕೇಂದ್ರ ಗೃಹ ಸಚಿವಾಲಯವು ಶನಿವಾರ ಟ್ವಿಟರ್‌ನಲ್ಲಿ ಮಾಹಿತಿ ಕೊಟ್ಟಿದೆ. “ಜೂ.21ರಂದು ಅಮರಾವತಿ ಯಲ್ಲಿ ನಡೆದ ಉಮೇಶ್‌ ಅವರ ಹತ್ಯೆಯ ತನಿಖೆಯನ್ನು ಎನ್‌ಐಎಗೆ ಒಪ್ಪಿಸಲಾಗಿದೆ. ಹತ್ಯೆಯ ಹಿಂದಿನ ಪಿತೂರಿ, ಸಂಘಟನೆಗಳ ಕೈವಾಡ ಮತ್ತು ವಿದೇಶದ ಸಂಪರ್ಕದ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಲಾಗುವುದು’ ಎಂದು ಸಚಿವಾಲಯ ತಿಳಿಸಿದೆ.

ಉಮೇಶ್‌ ಅವರು ವಾಟ್ಸ್‌ಆ್ಯಪ್‌ನಲ್ಲಿ ಬಿಜೆಪಿ ಮಾಜಿ ವಕ್ತಾರೆ ನೂಪುರ್‌ ಶರ್ಮಾ ಅವರನ್ನು ಬೆಂಬಲಿಸಿ ಸಂದೇಶ ವೊಂದನ್ನು ಕಳುಹಿಸಿದ್ದರು ಎನ್ನುವ ಕಾರಣಕ್ಕೆ ಅವರನ್ನು ಹತ್ಯೆ ಮಾಡಲಾಗಿತ್ತು ಎಂದು ಪ್ರಾರ್ಥಮಿಕ ತನಿಖೆ ಯಲ್ಲಿ ತಿಳಿದುಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next