Advertisement

ಸ್ಥಾನ ನಿಭಾಯಿಸಲು ಆಗುತ್ತಿಲ್ಲ: ವಿಶ್ವನಾಥ್‌

01:39 AM Jan 02, 2019 | Team Udayavani |

ಬೆಂಗಳೂರು: ಆರೋಗ್ಯ ಸಮಸ್ಯೆಯಿಂದಾಗಿ ರಾಜ್ಯಾಧ್ಯಕ್ಷ ಸ್ಥಾನ ನಿಭಾಯಿಸಲು ಆಗುತ್ತಿಲ್ಲ ಎಂದಷ್ಟೇ ಹೇಳಿದ್ದೇನೆ ಹೊರತು ರಾಜೀನಾಮೆ ಕೊಡುತ್ತೇನೆ ಎಂದು ಹೇಳಿಲ್ಲ ಎಂಬುದಾಗಿ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಹೇಳಿದ್ದಾರೆ. ನನಗೆ ಕೊಟ್ಟಿರುವ ಜವಾಬ್ದಾರಿ ವಾಪಸ್‌ ಪಡೆಯರಿ ಅಂತ ಕೇಳಬೇಕು ಅಂದುಕೊಂಡಿದ್ದೇನೆ ಎಂದೂ ತಿಳಿಸಿದ್ದಾರೆ.

Advertisement

ಗುರುವಾರ ಪಕ್ಷದ ಶಾಸಕರು, ಮಾಜಿ ಶಾಸಕರು, ರಾಜ್ಯ ಮತ್ತು ಜಿಲ್ಲಾ ಪದಾಧಿಕಾರಿಗಳ ಸಭೆ ಇದೆ. ಅಲ್ಲಿ ದೇವೇಗೌಡರ ಮುಂದೆ ಪ್ರಸ್ತಾವಿಸುತ್ತೇನೆ. ದೇವೇಗೌಡರು ಹಿರಿಯರು, ಅನುಭವಿಗಳು, ಅವರು ಹೇಳಿದಂತೆ ಕೇಳುತ್ತೇನೆ ಎಂದರು. ದೇವೇಗೌಡ ಅವರು ನನ್ನ ಜೀವನದ ಸಂಧ್ಯಾ ಕಾಲದಲ್ಲಿ ನನ್ನನ್ನು ಶಾಸಕನಾಗಲು ಅವಕಾಶ ಕೊಟ್ಟಿದ್ದಾರೆ. ಹೀಗಾಗಿ ಅವರ ನಿರ್ಧಾರಕ್ಕೆ ಬದ್ಧ ಎಂದು ಹೇಳಿದರು.

ಮೂಲಗಳ ಪ್ರಕಾರ ಎಚ್‌. ವಿಶ್ವನಾಥ್‌ ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಲು ತೀರ್ಮಾನಿಸಿದ್ದಾರೆ. ದೇವೇಗೌಡ ಮತ್ತು ಕುಮಾರ ಸ್ವಾಮಿ ಅವರು ಮನವೊಲಿಸಿ ಅಧಿಕಾರ ಕೊಡುವ ಕುರಿತು ಭರವಸೆ ನೀಡಿದರೆ ತೀರ್ಮಾನ ಬದಲಾಯಿಸಬಹುದು ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next