Advertisement

Undemocratic; ಪ್ರಧಾನಿಯ ಧ್ವನಿ ಹತ್ತಿಕ್ಕುವ ಪ್ರಯತ್ನ: ವಿಪಕ್ಷಗಳ ವಿರುದ್ಧ ಮೋದಿ ಕಿಡಿ

05:44 PM Jul 22, 2024 | Team Udayavani |

ಹೊಸದಿಲ್ಲಿ: ಸಂಸತ್ತು ‘ದಳ’ಕ್ಕಾಗಿ ಅಲ್ಲ ‘ದೇಶ’ಕ್ಕಾಗಿ ಎಂದು ಪ್ರತಿಪಾದಿಸಿದ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿ, ಕೆಲವು ಪಕ್ಷಗಳು ತಮ್ಮ ರಾಜಕೀಯ ವೈಫಲ್ಯಗಳನ್ನು ಮರೆಮಾಚಲು ಸಂಸತ್ತಿನಲ್ಲಿ ನಕಾರಾತ್ಮಕ ರಾಜಕೀಯ ದುರುಪಯೋಗ ಮಾಡಿಕೊಂಡಿವೆ ಎಂದು ಸೋಮವಾರ ಕಿಡಿ ಕಾರಿದರು.

Advertisement

ಸಂಸತ್ತಿನ ಬಜೆಟ್ ಅಧಿವೇಶನ ಆರಂಭಕ್ಕೂ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಮೋದಿ, ‘ಮಂಗಳವಾರ ಮಂಡನೆಯಾಗಲಿರುವ ಕೇಂದ್ರ ಬಜೆಟ್ ಮುಂದಿನ ಐದು ವರ್ಷಗಳ ಪಯಣಕ್ಕೆ ದಿಕ್ಸೂಚಿಯಾಗಲಿದ್ದು 2047 ರಲ್ಲಿ ವಿಕಸಿತ ಭಾರತ ಕನಸನ್ನು ನನಸಾಗಿಸಲು ಅಡಿಪಾಯ ಹಾಕುತ್ತದೆ’ ಎಂದರು.

‘ಲೋಕಸಭೆ ಚುನಾವಣೆಯಲ್ಲಿ ಜನರು ತಮ್ಮ ತೀರ್ಪು ನೀಡಿದ್ದಾರೆ. ಮುಂದಿನ ಐದು ವರ್ಷಗಳ ಕಾಲ ದೇಶಕ್ಕಾಗಿ ಎಲ್ಲ ರಾಜಕೀಯ ಪಕ್ಷಗಳು ಒಟ್ಟಾಗಿ ಹೋರಾಡಬೇಕಾಗಿದೆ’ ಎಂದು ಮೋದಿ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next