Advertisement
ಲೋಕಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಅಗತ್ಯವಿತ್ತಾ? ಎಂಬ ವಿಷಯ ಸಾಮಾಜಿಕ ಜಾಲತಾಣಗಳಲ್ಲೂ ತೀವ್ರ ಚರ್ಚೆಯಾಗುತ್ತಿದ್ದು, ಸ್ವತಃ ನಾಯಕರೇ ಟ್ವಿಟರ್ನಲ್ಲಿ ಅಭಿಪ್ರಾಯ ಟ್ವೀಟಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ ಬಿ.ಎಸ್.ಯಡಿಯೂರಪ್ಪ ಅವರು, ಮೂರೂ ಪಕ್ಷಗಳಿಗೆ ಚುನಾವಣೆ ಅಗತ್ಯವಿರಲಿಲ್ಲ. ಆದರೆ, ಆಯೋಗ ಯಾಕೆ ಘೋಷಣೆ ಮಾಡಿತೋ ಅರ್ಥವಾಗುತ್ತಿಲ್ಲ ಎಂದಿದ್ದಾರೆ.
Related Articles
Advertisement
ನಾಲ್ಕು ತಿಂಗಳ ಅವಧಿಗೆ ಹಣ ವೆಚ್ಚ ಮಾಡುವ ಬದಲು 2019ರ ಚುನಾವಣೆಗೆ ಸ್ಪರ್ಧೆ ಮಾಡುವುದು ಸೂಕ್ತ. ಒಂದೊಮ್ಮೆ ಉಪ ಚುನಾವಣೆಯಲ್ಲಿ ಸ್ಪರ್ಧಿಸಿದರೆ ಮುಂದಿನ ಚುನಾವಣೆಯಲ್ಲಿ ಟಿಕೆಟ್ ದೊರೆಯುವ ಖಾತರಿಯೂ ಇಲ್ಲ. ಸೋತರಂತೂ ಟಿಕೆಟ್ ಸಿಗುವುದು ಅನುಮಾನ. ಹೀಗಿರುವಾಗ ಅನಗತ್ಯ “ರಿಸ್ಕ್’ ತೆಗೆದುಕೊಳ್ಳುವುದು ಬೇಡ ಎಂಬುದು ಆಕಾಂಕ್ಷಿಗಳ ಅಭಿಪ್ರಾಯ. ಹೀಗಾಗಿ, ಪಕ್ಷಗಳ ವತಿಯಿಂದಲೇ ಚುನಾವಣೆ ವೆಚ್ಚ ಭರಿಸಬೇಕಾದ ಅನಿವಾರ್ಯತೆ ಎದುರಾಗಿದೆ.
ಸಮ್ಮಿಶ್ರ ಸರ್ಕಾರದ ಪಾಲುದಾರ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ಗೆ ಅಗ್ನಿಪರೀಕ್ಷೆ, ಬಿಜೆಪಿಗೆ ಪ್ರತಿಷ್ಠೆಯಾಗಿರುವುದರಿಂದ ಇಷ್ಟವಿಲ್ಲದಿದ್ದರೂ ಅಭ್ಯರ್ಥಿಗಳನ್ನು ಹುಡುಕಿ ನಿಲ್ಲಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಅ.16 ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾಗಿರುವುದರಿಂದ ಪಿತೃ ಪಕ್ಷ ಕಳೆಯುತ್ತಿದ್ದಂತೆ ಬುಧವಾರ ಅಥವಾ ಗುರುವಾರ ಅಭ್ಯರ್ಥಿಗಳ ಘೋಷಣೆಯಾಗುವ ಸಾಧ್ಯತೆಯಿದೆ.