Advertisement

ಬೈಕ್ ಗೆ ಗುದ್ದಿ ಕೆಳಕ್ಕೆ ಬಿದ್ದ ಸವಾರರಿಗೆ ಚೂರಿ ಇರಿತ! ಉಳ್ಳಾಲದಲ್ಲಿ ಆಗಂತುಕರಿಂದ ಕೃತ್ಯ

09:38 AM Dec 26, 2020 | keerthan |

ಉಳ್ಳಾಲ: ತಡರಾತ್ರಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಯುವಕರಿಗೆ ಹಿಂಬದಿಯಿಂದ ಢಿಕ್ಕಿ ಹೊಡೆದ ಅಪರಿಚಿತ ತಂಡವೊಂದು, ಚೂರಿಯಲ್ಲಿ ಚುಚ್ಚಿ ಕೊಲೆಯತ್ನ ನಡೆಸಿದ ಘಟನೆ ಶುಕ್ರವಾರ ತಡರಾತ್ರಿ ಉಳ್ಳಾಲ ಠಾಣಾ ವ್ಯಾಪ್ತಿಯ ಕುತ್ತಾರು ಕೃಷ್ಣಕೋಡಿಯಲ್ಲಿ ನಡೆದಿದೆ.

Advertisement

ಸೇವಂತಿಗುಡ್ಡೆ ನಿವಾಸಿ ಆದಿತ್ಯ (23) ಮತ್ತು ಪಂಡಿತ್ ಹೌಸ್ ನಿವಾಸಿ ಪವನ್ (27) ಗಾಯಗೊಂಡವರು. ಚರ್ಚೊಂದರಲ್ಲಿ ಕ್ಯಾಟರಿಂಗ್ ನಲ್ಲಿ ಕೆಲಸಕ್ಕಿದ್ದ ಸಹೋದರನನ್ನು ಕರೆ ತರಲು ತೆರಳುವಾಗ ಘಟನೆ ನಡೆದಿದೆ.

ಕೃಷ್ಣಕೋಡಿಯಲ್ಲಿ ಬಳಿ ಹಿಂಬದಿಯಿಂದ ಬಂದ ಅಪರಿಚಿತ ಬೈಕ್ ಆದಿತ್ಯ ಮತ್ತು ಪವನ್ ಇದ್ದ ಬೈಕ್ ಗೆ ಗುದ್ದಿದೆ. ಈ ವೇಳೆ ಇಬ್ಬರು ರಸ್ತೆಗೆಸೆಯಲ್ಪಟ್ಟಿದ್ದಾರೆ. ಆ ಬಳಿಕ ಇಬ್ಬರಿಗೂ ಚೂರಿಯಿಂದ ಇರಿದ ಆಗಂತುಕರು ಸ್ಥಳದಿಂದ ಪರಾರಿಯಾಗಿದ್ದಾರೆ. ಇದೇ ಸ್ಥಳದಲ್ಲಿ ಈ ಹಿಂದೆಯೂ ಆರ್ ಎಸ ಎಸ್ ಮುಖಂಡನ ಹತ್ಯೆ ಯತ್ನ ನಡೆದಿತ್ತು.

ಇದನ್ನೂ ಓದಿ:ಜಾತ್ರೆಯಿಂದ ಬರುತ್ತಿದವರಿಗೆ ಅಡ್ಡಿಯಾದ ಜವರಾಯ: ಬೈಕ್ ಅಪಘಾತದಲ್ಲಿ ಸವಾರ ಸ್ಥಳದಲ್ಲೇ ಸಾವು

ಗಾಯಗೊಂಡಿರುವ ಇಬ್ಬರನ್ನು ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next