Advertisement

ಕೇಂದ್ರ ಬಜೆಟ್ 2019: ರೈಲ್ವೆ ಆಧುನೀಕರಣಕ್ಕೆ ಆದ್ಯತೆ, ಮೆಟ್ರೋ ಸಂಪರ್ಕ ವಿಸ್ತರಣೆ

09:45 AM Jul 06, 2019 | Team Udayavani |

ನವದೆಹಲಿ: ದೇಶದ ರೈಲ್ವೆ ಆಧುನೀಕರಣಕ್ಕೆ ಹೆಚ್ಚು ಒತ್ತು ನೀಡಲು ಯೋಜನೆ ರೂಪಿಸಲಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಲೋಕಸಭೆಯಲ್ಲಿ 2019-20ನೇ ಸಾಲಿನ ಬಜೆಟ್ ಮಂಡನೆ ವೇಳೆ ಘೋಷಿಸಿದ್ದಾರೆ.

Advertisement

ಈ ನಿಟ್ಟಿನಲ್ಲಿ ರೈಲ್ವೆ ಇಲಾಖೆ ಆಧುನೀಕರಣಕ್ಕೆ 1.56 ಲಕ್ಷ ಕೋಟಿ ರೂಪಾಯಿ ಮೀಸಲಿಡಲಾಗಿದೆ. ಸಬ್ ಅರ್ಬನ್ ರೈಲ್ವೆ, ಮೆಟ್ರೋ ರೈಲ್ವೆ ಸಂಪರ್ಕ ವಿಸ್ತರಣೆಗೆ ಒತ್ತು ಕೊಡಲು ಆದ್ಯತೆ.

ಸರಕು ಸಾಗಣೆ ರೈಲುಗಳಿಗೆ ಪ್ರತ್ಯೇಕ ಹಳಿಗಳ ನಿರ್ಮಾಣ. ಮೆಟ್ರೋ ರೈಲು ಉತ್ತೇಜಿಸಲು ಪಿಪಿಪಿ ಮಾದರಿ ಜಾರಿಗೊಳಿಸಲು ಆದ್ಯತೆ.

Advertisement

Udayavani is now on Telegram. Click here to join our channel and stay updated with the latest news.

Next