Advertisement

Union Budget 2024: ರಾಮನಗರಕ್ಕೆ ಈ ಬಾರಿಯಾದರೂ ದೊರೆತೀತೆ ಅನುದಾನ

05:55 PM Jan 30, 2024 | Team Udayavani |

ಉದಯವಾಣಿ ಸಮಾಚಾರ
ರಾಮನಗರ: ಕೆಲ ಸಣ್ಣ ಪುಟ್ಟ ಕಾರ್ಯ ಕ್ರಮಗಳನ್ನು ಹೊರತುಪಡಿಸಿದರೆ, ಕಳೆದ 5 ವರ್ಷಗಳ ಅವಧಿಯಲ್ಲಿ ರಾಮನಗರ ಜಿಲ್ಲೆಗೆ ಕೇಂದ್ರ ಸರ್ಕಾರ ಬಜೆಟ್‌ನಲ್ಲಿ ದೊರೆತಿರುವ ಮಹ ತ್ವದ ಕೊಡುಗೆಗಳ್ಯಾವುವೂ ಇಲ್ಲವಾಗಿದೆ. ಇದೀಗ ತನ್ನ ಕೊನೆಯ ಬಜೆಟ್‌ನಲ್ಲಾದರೂ ಕೇಂದ್ರ ವಿತ್ತ ಸಚಿವರು ರೇಷ್ಮೆನಾಡಿಗೆ ಮಹತ್ತರ ಕೊಡುಗೆ ನೀಡುವರೇ ಎಂಬ ನಿರೀಕ್ಷೆಯಲ್ಲಿ ಜಿಲ್ಲೆಯ ಜನತೆ ಕೇಂದ್ರ ಬಜೆಟ್‌ನತ್ತ ನಿರೀಕ್ಕೆ ಇಟ್ಟಿದ್ದಾರೆ.

Advertisement

ಬೆಂಗಳೂರು ನಗರಕ್ಕೆ ಹೊಂದಿಕೊಂಡಂತೆ ಇರುವ ರಾಮನಗರ ಜಿಲ್ಲೆಯ ಅಭಿವೃದ್ಧಿಗೆ ಕೇಂದ್ರದಿಂದ ಸಾಕಷ್ಟು ನೆರವು ನಿರೀಕ್ಷಿಸಿದೆ. ನರೇಗಾ, ಜಲಜೀವನ್‌ ಮಿಷನ್‌, ಕಿಸಾನ್‌ ಸಮ್ಮಾನ್‌ ಮೊದಲಾದ ಸಾರ್ವತ್ರಿಕ ಯೋಜನೆಗಳನ್ನು ಹೊರತುಪಡಿಸಿದರೆ ಜಿಲ್ಲೆಗಾಗಿ ಕೇಂದ್ರ ಸರ್ಕಾರ ನೀಡಿದ ಪ್ರತ್ಯೇಕ ಯೊಜನೆಗಳು ಯಾವುವೂ ಇಲ್ಲವಾಗಿವೆ.

ಈ ಬಾರಿ ಹಲವು ನಿರೀಕ್ಷೆ: ಕೇಂದ್ರ ವಿತ್ತಸಚಿವ ನಿರ್ಮಲಾ ಸೀತಾರಾಮ್‌ ತನ್ನ ಕೊನೆಯ ಬಜೆಟ್‌ ನಲ್ಲಿ ಮಹತ್ವದ ಕೊಡುಗೆಗಳನ್ನು ಜಿಲ್ಲೆಗೆ ನೀಡಬಹುದೇ ಎಂಬ ನಿರೀಕ್ಷೆ ಜನತೆಯಲ್ಲಿ ಗರಿಗೆದರಿದೆ. ಕೇಂದ್ರ ಸಚಿವರು ಜಿಲ್ಲೆಗೆ ಈ ಬಾರಿಯಾದರೂ ಬಜೆಟ್‌ನಲ್ಲಿ ಮಹತ್ವದ ಕೊಡುಗೆಗಳನ್ನು ನೀಡಲಿ ಎಂದು ಜಿಲ್ಲೆಯ ಜನತೆ ಬಯಸುತ್ತಿದ್ದಾರೆ.

ದೇಶಿ ಆಟಿಕೆ ಉದ್ಯಮಕ್ಕೆ ಉತ್ತೇಜನ ನೀಡುವುದಾಗಿ ಕೇಂದ್ರ ಸರ್ಕಾರ ಹಲ ವಾರು ಬಾರಿ ಹೇಳುತ್ತಾ ಬಂದಿದ್ದು, ಕೋವಿಡ್‌-19 ಬಳಿಕ ಸಂಕಷ್ಟಕ್ಕೆ ಸಿಲುಕಿ ರುವ ಚನ್ನಪಟ್ಟಣದ ಕರಕುಶಲ ಉದ್ಯಮಕ್ಕೆ ಉತ್ತೇಜನ ನೀಡುವ ಕೆಲಸ ಈ ಬಜೆಟ್‌ನಲ್ಲಾದರೂ ಆಗಲಿ, ಚನ್ನಪಟ್ಟಣದಲ್ಲಿ ಕೇಂದ್ರ ಸರ್ಕಾರ ಆಟಿಕೆಗಳ ನಿರ್ಮಾಣದ ಕ್ಲಸ್ಟರ್‌ ತೆರೆದು ಸಾಂಪ್ರದಾಯಿಕ ಬೊಂಬೆಗಳ ಉದ್ಯಮಕ್ಕೆ ಚೈತನ್ಯ ನೀಡಲಿ ಎಂದು ಜನತೆ ನಿರೀಕ್ಷಿಸುತ್ತಿದ್ದಾರೆ.

ಇದರೊಂದಿಗೆ ರಾಮನಗರ ಚನ್ನಪಟ್ಟಣ ಮಾರ್ಗದಲ್ಲಿ ಪ್ರತಿನಿತ್ಯ 15 ಸಾವಿ ರಕ್ಕೂ ಹೆಚ್ಚು ಮಂದಿ ಕಾರ್ಮಿಕರು, ನೌಕರರು ರೈಲಿನ ಮೂಲಕ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದು, ಇವರ ಅನುಕೂಲಕ್ಕಾಗಿ ಹೆಚ್ಚುವರಿ ರೈಲು ಸೇವೆ. ರೈಲು ನಿಲ್ದಾಣಗಳ ಅಭಿವೃದ್ಧಿಗೆ ಕೇಂದ್ರ ಬಜೆಟ್‌ನಲ್ಲಿ ವಿತ್ತ ಸಚಿವರು ಚಿತ್ತೈಸ ಬೇಕಿದೆ.

Advertisement

ಸುಸಜ್ಜಿತ ಇಎಸ್‌ಐ ಆಸ್ಪತ್ರೆ ಬೇಕು: ರಾಮನಗರ ಜಿಲ್ಲೆಯಲ್ಲಿ ಬಿಡದಿ, ಹಾರೋಹಳ್ಳಿ ಕೈಗಾರಿಕಾ ಪ್ರದೇಶದ ಜೊತೆಗೆ ಸಣ್ಣ ಪುಟ್ಟ ಕೈಗಾರಿಕೆಗಳು ಇದ್ದು, ಹತ್ತಾರು ಸಾವಿರ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಕಾರ್ಮಿಕರ ಹಿತದೃಷ್ಟಿಯಿಂದ ಜಿಲ್ಲೆಗೆ ಸುಸಜ್ಜಿತ ಇಎಸ್‌ಐ ಆಸ್ಪತ್ರೆ ಅತ್ಯವಶ್ಯಕ ವಾಗಿದೆ. ಕೇಂದ್ರ ಸರ್ಕಾರ ಈ ಬಜೆಟ್‌ನಲ್ಲಾದರೂ ಸುಸಜ್ಜಿತ ಇಎಸ್‌ಐ ಆಸ್ಪತ್ರೆಗೆ ಅನುಮೋದನೆ ನೀಡಿದ್ದೇ ಆದಲ್ಲಿ ಹತ್ತಾರು ಸಾವಿರ ಕಾರ್ಮಿಕ ಕುಟುಂಬಗಳಿಗೆ ನೆರವಾಗಲಿದೆ.

ಕನಕಪುರ-ಚಾಮರಾಜನಗರ ರೈಲ್ವೆಗೆ ಸಿಗುತ್ತ ಅನುಮೋದನೆ

ಜಿಲ್ಲೆಯ ಹಲವು ದಿನಗಳ ಬೇಡಿಕೆಯಾಗಿರುವ ಹೆಜ್ಜಾಲ ಮೂಲಕ ಕನಕಪುರ, ಮಳವಳ್ಳಿ, ಕೊಳ್ಳೇಗಾಲ ಮೂಲಕ ಚಾಮರಾಜನಗರಕ್ಕೆ ಸಂಪರ್ಕ ಕಲ್ಪಿಸುವ ಹೊಸ ರೈಲ್ವೆ ಮಾರ್ಗ ಹತ್ತಾರು ವರ್ಷಗಳಿಂದ ಕೇವಲ ದಾಖಲೆಯಲ್ಲೇ ಉಳಿದಿದ್ದು, ಈ ಯೋಜನೆಗೆ ಈ ಬಾರಿಯ ಬಜೆಟ್‌ನಲ್ಲಾದರೂ ಕೇಂದ್ರ ಸರ್ಕಾರ ಅನುಮೋದನೆ ನೀಡುವುದೇ ಎಂಬುದು ಜನರ ನಿರೀಕ್ಷೆಯಾಗಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಿರುವ ಕಾರಣ ಟ್ರಾಮಾ ಸೆಂಟರ್‌, ಬಿಡದಿಯವರೆಗೆ ಸಬ್‌ಅರ್ಬನ್‌ ರೈಲ್ವೆ ಯೋಜನೆ ವಿಸ್ತರಣೆ, ಕೇಂದ್ರ ಸರ್ಕಾರದಿಂದ ಜಿಲ್ಲೆಯಲ್ಲಿ ರೇಷ್ಮೆ ಉದ್ಯಮಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಜವಳಿ ಪಾರ್ಕ್‌ ನಿರ್ಮಾಣ, ಬೆಂ-ಮೈ ಎಕ್ಸ್‌ಪ್ರೆಸ್‌ ವೇನಲ್ಲಿ ಕೆಫೆಟೇರಿಯಾ ನಿರ್ಮಾಣ ಸೇರಿದಂತೆ ಹಲವು ಯೋಜನೆಗಳಿಗೆ ಈ ಬಾರಿಯ ಬಜೆಟ್‌ನಲ್ಲಿ ಕೇಂದ್ರದ ಅನುಮೋದನೆ ದೊರೆತೀತೆ ಕಾಯ್ದು ನೋಡಬೇಕಿದೆ.

■ ಸು.ನಾ.ನಂದಕುಮಾರ್‌

Advertisement

Udayavani is now on Telegram. Click here to join our channel and stay updated with the latest news.

Next