Advertisement

Union budget ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ: ಮಂಗಳೂರಿನಲ್ಲಿ ಕಾಂಗ್ರೆಸ್ ಪ್ರತಿಭಟನೆ

05:56 PM Jul 27, 2024 | Team Udayavani |

ಮಂಗಳೂರು: ಕೇಂದ್ರ ಸರಕಾರ ಬಜೆಟ್ ನಲ್ಲಿ ಕರ್ನಾಟಕ ರಾಜ್ಯಕ್ಕೆ ಯಾವುದೇ ಅನುದಾನ, ಯೋಜನೆ ನೀಡದೆ ಅನ್ಯಾಯ ಎಸಗಿದೆ ಎಂದು ಆರೋಪಿಸಿ ದ.ಕ ಜಿಲ್ಲಾ ಕಾಂಗ್ರೆಸ್ ಮಂಗಳೂರಿನ ಲಾಲ್ ಭಾಗ್ ನಲ್ಲಿರುವ ಗಾಂಧಿ ಪ್ರತಿಮೆಯ ಎದುರು ಶನಿವಾರ ಪ್ರತಿಭಟನೆ ನಡೆಸಿದರು.

Advertisement

ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಅವರು ಮಾತನಾಡಿ, ರಾಜ್ಯದ ತೆರಿಗೆ ಪಾಲು ನೀಡದೆ ಅನ್ಯಾಯ ಎಸಗಿದ್ದ ಕೇಂದ್ರ ಸರಕಾರ ಈ ಬಾರಿಯ ಬಜೆಟ್ ನಲ್ಲಿಯೂ ಚೊಂಬು ಮಾತ್ರ ನೀಡಿದೆ ಎಂದು ಟೀಕಿಸಿದರು.

ಮಾಜಿ ಸಚಿವ ರಮಾನಾಥ ರೈ, ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶಾಲೆಟ್ ಪಿಂಟೋ, ಮಾಜಿ ಸಚಿವ ಅಭಯ ಚಂದ್ರ ಜೈನ್, ಸದಾಶಿವ ಉಳ್ಳಾಲ, ಶಶಿಧರ ಹೆಗ್ಡೆ ಮೊದಲಾದವರು ಪಾಲ್ಗೊಂಡು ಖಾಲಿ ಚೊಂಬು ಪ್ರದರ್ಶಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next