Advertisement

ಸೋಲುತ್ತೇವೆ ಎಂಬುದನ್ನು ಕಾಂಗ್ರೆಸ್-ಸಿಪಿಐಎಂ ಮೈತ್ರಿ ಸಾಬೀತುಪಡಿಸಿದೆ :ತ್ರಿಪುರಾದಲ್ಲಿ ಶಾ

02:53 PM Feb 12, 2023 | Team Udayavani |

ಚಾಂಡೀಪುರ (ತ್ರಿಪುರಾ): ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳುವ ಮೂಲಕ ಸಿಪಿಐ(ಎಂ) ತಾವು ಚುನಾವಣೆಯಲ್ಲಿ ಸೋಲುತ್ತೇವೆ ಎಂಬುದನ್ನು ಸಾಬೀತುಪಡಿಸಿದೆ ಎಂದು ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್‌ ಶಾ ಹೇಳಿದ್ದಾರೆ.

Advertisement

ಚಾಂಡೀಪುರದಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಶಾ, ಬಿಜೆಪಿಯನ್ನು ಏಕಾಂಗಿಯಾಗಿ ಎದುರಿಸಲು ಅವರಿಗೆ ಸಾಧ್ಯವಾಗಲಿಲ್ಲ. ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು, ಅವರು ತಮ್ಮ ಅನೇಕ ಸದಸ್ಯರನ್ನು ಹತ್ಯೆಗೈದ ಸಿಪಿಐ(ಎಂ) ಜೊತೆ ಸೇರಿಕೊಂಡರು. ತಿಪ್ರಾ ಮೋಥಾವನ್ನೂ ಪಾನ್‌ ಮಾಡಿಕೊಂಡಿದ್ದಾರೆ ಎಂದು ಕಿಡಿ ಕಾರಿದರು.

ತ್ರಿಪುರಾಕ್ಕಾಗಿ ಕಾಂಗ್ರೆಸ್ ಮತ್ತು ಸಿಪಿಐ(ಎಂ) ಏನನ್ನೂ ಮಾಡಿಲ್ಲ. ಬಿಜೆಪಿ ಆಡಳಿತದಲ್ಲಿ ತ್ರಿಪುರಾದಲ್ಲಿ ಅಭಿವೃದ್ಧಿಯಾಗಿದೆ. ಎಲ್ಲರ ಅಭಿವೃದ್ಧಿಗೆ ಶ್ರಮಿಸಿದ್ದೇವೆ. ಕಾಂಗ್ರೆಸ್ ಮತ್ತು ಸಿಪಿಐ(ಎಂ) ಆದಿವಾಸಿಗಳಿಗಾಗಿ ಏನನ್ನೂ ಮಾಡಿಲ್ಲ, ಈಗ ಆದಿವಾಸಿಗಳ ಮತ ಪಡೆಯಲು ಆದಿವಾಸಿ ಸಿಎಂ ಮುಖವನ್ನು ಆಯ್ಕೆ ಮಾಡಿದ್ದಾರೆ ಎಂದು ಕಿಡಿ ಕಾರಿದರು.

Advertisement

Udayavani is now on Telegram. Click here to join our channel and stay updated with the latest news.

Next