Advertisement

J&K ನಲ್ಲಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರಿದ್ದ ಕಾರಿಗೆ ಟ್ರಕ್ ಢಿಕ್ಕಿ

10:42 PM Apr 08, 2023 | Team Udayavani |

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ರಾಂಬನ್ ಜಿಲ್ಲೆಯ ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರ ಕಾರಿಗೆ ಟ್ರಕ್ ಢಿಕ್ಕಿ ಹೊಡೆದಿದ್ದು, ಅದ್ರಷ್ಟವಷಾತ್ ಸಚಿವರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.

Advertisement

ಈ ಕುರಿತು ಹೇಳಿಕೆ ನೀಡಿರುವ ರಾಂಬನ್ ಪೊಲೀಸರು, ಇಂದು ಜಮ್ಮುವಿನಿಂದ ಶ್ರೀನಗರಕ್ಕೆ ರಸ್ತೆ ಮಾರ್ಗವಾಗಿ ತೆರಳುತ್ತಿದ್ದಾಗ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರ ಕಾರು ಸಣ್ಣ ಮಟ್ಟದ ಅಪಘಾತಕ್ಕೀಡಾಗಿದೆ.ಅಪಘಾತದಲ್ಲಿ ಯಾರಿಗೂ ಗಾಯಗಳಾಗಿಲ್ಲ, ಕಿರಣ್ ರಿಜಿಜು ಅವರನ್ನು ಅವನ ಗಮ್ಯಸ್ಥಾನಕ್ಕೆ ಸುರಕ್ಷಿತವಾಗಿ ತಲುಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಘಟನೆಯ ವಿಡಿಯೋದಲ್ಲಿ ಅಪಘಾತದ ನಂತರ ಸ್ಥಳದಲ್ಲಿ ಭದ್ರತಾ ಅಧಿಕಾರಿಗಳು ಜಮಾವಣೆಯಾಗಿರುವುದನ್ನು ತೋರಿಸುತ್ತದೆ.

Advertisement

Udayavani is now on Telegram. Click here to join our channel and stay updated with the latest news.

Next