Advertisement

ಹಂಪಿಗೆ ಭೇಟಿ ನೀಡಿದ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ

06:04 PM Oct 30, 2022 | Team Udayavani |

ಹೊಸಪೇಟೆ: ಕೇಂದ್ರ ವಿದೇಶಾಂಗ ಮತ್ತು ಸಂಸ್ಕೃತಿ ಸಚಿವೆ ಮೀನಾಕ್ಷಿ ಲೇಖಿ ಪರಿವಾರ ಸಮೇತ ವಿಶ್ವವಿಖ್ಯಾತ ಹಂಪಿಗೆ ಭಾನುವಾರ ಭೇಟಿ ನೀಡಿ, ಪ್ರಸಿದ್ಧ ವಿರೂಪಾಕ್ಷೇಶ್ವರ, ಪಂಪಾದೇವಿ ಹಾಗೂ ಭುವನೇಶ್ವರಿ ದೇವಿ ದರ್ಶನ ಪಡೆದರು.

Advertisement

ಮೊದಲು ಪಕ್ಕದ ಆನೆಗುಂದಿಯಲ್ಲಿರುವ ಆಂಜನಾದ್ರಿ ಬೆಟ್ಟಕ್ಕೆ ಭೇಟಿ ಮಾಡಿದ ಸಚಿವರು, ವಿರೂಪಾಕ್ಷೇಶ್ವರ ದೇವರ ದರ್ಶನ ಪಡೆದರು. ದೇವಾಲಯದ ಮೇಲಿನ ವಾಸ್ತು ಹಾಗೂ ಉಬ್ಬು ಶಿಲ್ಪವನ್ನು ಕಂಡು ಬೆರಗಾದರು. ಬಳಿಕ ಹಜಾರರಾಮ ದೇವಾಲಯ ಸೇರಿದಂತೆ ಪ್ರಮುಖ ಸ್ಮಾರಕಗಳನ್ನು ವೀಕ್ಷಣೆ ಮಾಡಿ ಕಣ್ತುಂಬಿಕೊಂಡರು.

ದೇವಾಲಯಕ್ಕೆ ಸಚಿವರು ಆಗಮಿಸುತ್ತಿದಂತೇ ದೇವಸ್ಥಾನದ ಪಟ್ಟದ ಆನೆ ಲಕ್ಷ್ಮೀ ಗಣ್ಯರಿಗೆ ಮಾಲಾರ್ಪಣೆ ಮಾಡಿ ಸ್ವಾಗತಿಸಿತು. ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ, ಹಿಂದೂ ಧಾರ್ಮಿಕ ದತ್ತಿ ಇಲಾಖೆ ಹಾಗೂ ಹಂಪಿ ಪೊಲೀಸ್ ಅಧಿಕಾರಿ, ಸಿಬ್ಬಂದಿ ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next