Advertisement

ಬಿಲ್ಕಿಸ್‌ ಕೇಸು: ಕಾನೂನು ಪ್ರಕಾರವೇ ಬಿಡುಗಡೆ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಸಮರ್ಥನೆ

12:14 AM Oct 19, 2022 | Team Udayavani |

ಗಾಂಧಿನಗರ/ಹೊಸದಿಲ್ಲಿ: ಗುಜರಾತ್‌ನಲ್ಲಿ 2002ರ ಮಾರ್ಚ್‌ನಲ್ಲಿ ಬಿಲ್ಕಿಸ್‌ ಬಾನೋ ಅವರ ಮೇಲೆ ಅತ್ಯಾಚಾರ ಎಸಗಿ ಶಿಕ್ಷೆಗೆ ಗುರಿಯಾದವರ ಬಿಡುಗಡೆ ಕ್ರಮವನ್ನು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್‌ ಜೋಶಿ ಸಮರ್ಥಿಸಿಕೊಂಡಿದ್ದಾರೆ.

Advertisement

ಗುಜರಾತ್‌ನ ಗಾಂಧಿನಗರದಲ್ಲಿ ಮಾತನಾಡಿದ ಅವರು, “ಕಾನೂನು ಪ್ರಕಾರವೇ ಅಪರಾಧಿಗಳನ್ನು ಬಿಡುಗಡೆ ಮಾಡಲಾಗಿದೆ. ಸರಕಾರ ಮತ್ತು ಸಂಬಂಧಪಟ್ಟ ಇಲಾಖೆಯ ವ್ಯಕ್ತಿಗಳು ನಿರ್ಧಾರ ತೆಗೆದುಕೊಂಡಿದ್ದಾರೆ ಎಂದ ಮೇಲೆ ಅದರಲ್ಲಿ ಮತ್ತೆ ಮಾತನಾಡುವಂಥದ್ದು ಏನೂ ಇಲ್ಲ’ ಜತೆಗೆ ಅವರು ಕಾರಾಗೃಹದಲ್ಲಿ ಕೆಲವು ಕಾಲ ಶಿಕ್ಷೆಯನ್ನೂ ಅನುಭವಿಸಿದ್ದಾರೆ ಎಂದರು ಜೋಶಿ.

ಕೇಂದ್ರ ಗೃಹ ಸಚಿವಾಲಯ ಅನುಮೋದನೆ ನೀಡಿದ ಅನಂತರವೇ ಅಪರಾಧಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದು ಗುಜರಾತ್‌ ಸರಕಾರ ಸುಪ್ರೀಂ ಕೋರ್ಟ್‌ಗೆ ಅಫಿದವಿತ್‌ ಸಲ್ಲಿಸಿದ ಬೆನ್ನಲ್ಲೇ ಸಚಿವ­ರಿಂದ ಈ ಹೇಳಿಕೆ ಬಂದಿದೆ. ಈ ನಡುವೆ, 11 ಮಂದಿಯನ್ನು ಬಿಡುಗಡೆ ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ನ.29ಕ್ಕೆ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂ ಕೋರ್ಟ್‌ ಮಂಗಳವಾರ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next