Advertisement

ಕೇಂದ್ರ ಸಚಿವ ಪ್ರತಾಪ್ ಸಾರಂಗಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

07:27 PM May 09, 2021 | Team Udayavani |

ಬಾಲಸೋರೆ : ಕೇಂದ್ರ ಸಚಿವ ಪ್ರತಾಪ್ ಸಾರಂಗಿ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕಿಡಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ ಎಂದು ವರದಿಯಾಗಿದೆ.

Advertisement

ಭಾನುವಾರ ಒಡಿಶಾದ ಬಾಲಸೋರೆ ಜಿಲ್ಲೆಯ ನಿಲಿಗಿರಿ ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಎದುರುಗಡೆಯಿಂದ ಬರುತ್ತಿದ್ದ ಟ್ರ್ಯಾಕ್ಟರ್ ಸಚಿವರ ಕಾರಿಗೆ ಢಿಕ್ಕಿ ಹೊಡೆದಿದೆ. ಘಟನೆಯಲ್ಲಿ ಪ್ರತಾಪ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ಸೇರಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಘಟನೆ ಕುರಿತು ತಮ್ಮ ಟ್ವಿಟರಿನಲ್ಲಿ ಮಾಹಿತಿ ಹಂಚಿಕೊಂಡಿರುವ ಸಚಿವರು, ಇತ್ತೀಚಿಗಷ್ಟೆ ಮೃತಪಟ್ಟ ನನ್ನ ಕ್ಷೇತ್ರದ ನಿವಾಸಿಯ ಕುಟುಂಬಕ್ಕೆ ಸಾಂತ್ವಾನ ಹೇಳಲು ಹೊರಟಿದ್ದೆ. ಈ ವೇಳೆ ನಿಲಿಗಿರಿ ಪ್ರದೇಶದ ಸಮೀಪ ಪುಡಸಲ್ ಎಂಬಲ್ಲಿ ಟ್ರ್ಯಾಕ್ಟರ್ ನಮ್ಮ ಕಾರಿಗೆ ಢಿಕ್ಕಿ ಹೊಡೆಯಿತು. ದೇವರ ದಯೆ ಹಾಗೂ ನನ್ನ ಜನರ ಆಶೀರ್ವಾದದ ಫಲವಾಗಿ ನಾನು ಪ್ರಾಣಾಪಾಯದಿಂದ ಪಾರಾಗಿದ್ದೇನೆ. ನನ್ನ ಮೂಗಿಗೆ ಸ್ವಲ್ಪ ಗಾಯವಾಗಿದ್ದನ್ನು ಬಿಟ್ಟರೆ ನಾನು ಅರಾಮ್ ಆಗಿದ್ದೇನೆ. ನನ್ನ ಪಿಎ ಹಾಗೂ ಕಾರು ಡ್ರೈವರ್ ಕೂಡ ಅರಾಮ್ ಇದ್ದಾರೆ ಎಂದು ಹೇಳಿಕೊಂಡಿದ್ದಾರೆ.

ಇನ್ನು ಘಟನೆ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಸ್ಥಳೀಯ ಪೊಲೀಸರು, ಸಚಿವರನ್ನು ನಿಲಿಗಿರಿಯಲ್ಲಿರುವ ಆಸ್ಪತ್ರೆಗೆ ದಾಖಲಿಸಿದರು. ಹಾಗೂ ಅಪಘಾತ ಮಾಡಿರುವ ಟ್ರ್ಯಾಕ್ಟರ್ ನ್ನು ವಶಕ್ಕೆ ಪಡೆದಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next