Advertisement

ಮಂಡ್ಯದಲ್ಲಿ ಗದ್ದೆಗಿಳಿದು ನಾಟಿ ಮಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

12:52 PM Aug 16, 2021 | Team Udayavani |

ಮಂಡ್ಯ: ತಾಲೂಕಿನ ಸಾತನೂರು ಬಳಿ ಕೇಂದ್ರ ಕೃಷಿ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರು ಗದ್ದೆಯಲ್ಲಿ ನಾಟಿ ಮಾಡಿ ಗಮನ ಸೆಳೆದರು.

Advertisement

ಕೃಷಿ ಸಚಿವರಾಗಿ ಮೊದಲ ಬಾರಿಗೆ ಮಂಡ್ಯಕ್ಕೆ ಆಗಮಿಸಿದ ಅವರು ಜನಾಶೀರ್ವಾದಕ್ಕೆ ಚಾಲನೆ ನೀಡಿ ನಂತರ ಸಾತನೂರಿನ ಕೃಷಿ ಜಮೀನೊಂದರಲ್ಲಿ ರೈತ ಮಹಿಳೆಯರೊಂದಿಗೆ ಗದ್ದೆಗಿಳಿದ ಸಚಿವೆ ಭತ್ತದ ಪೈರು ಹಿಡಿದು ನಾಟಿ ಮಾಡಿದರು. ಕೃಷಿಕ ಮಹಿಳೆಯರಂತೆ ನಾಟಿ ಮಾಡಿದ್ದು ವಿಶೇಷವಾಗಿತ್ತು.

ಇದನ್ನೂ ಓದಿ:ಬಿಜೆಪಿಯ ಜನಾಶೀರ್ವಾದ ಯಾತ್ರೆಗೆ ರಾಜೀವ್ ಚಂದ್ರಶೇಖರ್ ಚಾಲನೆ

ನಂತರ ಆಲೆಮನೆಗೆ ಭೇಟಿ ನೀಡಿ ಬೆಲ್ಲ ತಯಾರಿಕೆಯ ಬಗ್ಗೆ ಮಾಹಿತಿ ಪಡೆದರು

Advertisement

Udayavani is now on Telegram. Click here to join our channel and stay updated with the latest news.

Next