Advertisement

ಕೇಂದ್ರ ಸಚಿವೆ ಸ್ಮೃತಿ ಇರಾನಿ ಧರ್ಮಸ್ಥಳಕ್ಕೆ ಭೇಟಿ

04:57 PM Nov 22, 2022 | Team Udayavani |

ಬೆಳ್ತಂಗಡಿ: ಕೇಂದ್ರ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಮಂಗಳವಾರ ಧರ್ಮಸ್ಥಳಕ್ಕೆ ಭೇಟಿ ನೀಡಿ ಶ್ರೀ ಮಂಜುನಾಥ ಸ್ವಾಮಿ ದೇವರ ದರ್ಶನ ಪಡೆದರು.

Advertisement

ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷದೀಪೋತ್ಸವ ಪ್ರಯುಕ್ತ ನ.22 ರ ಸರ್ವಧರ್ಮ 90 ನೇ ಅಧಿವೇಶನ ಉದ್ಘಾಟನೆ ನೆರವೇರಿಸಲಿರುವ ಅವರು ದೆಹಲಿಯಿಂದ ನೇರವಾಗಿ ಮಂಗಳೂರು ವಿಮಾನ ನಿಲ್ದಾಣ ಬಂದಿಳಿದು ಬಳಿಕ ಮಾರ್ಗದ ಮೂಲಕ ಧರ್ಮಸ್ಥಳ ತಲುಪಿದರು.

ಈ ವೇಳೆ ಡಿ.ಸುರೇಂದ್ರ ಕುಮಾರ್, ಶ್ರದ್ಧಾ ಅಮಿತ್, ಡಿ.ಶ್ರೇಯಸ್ ಕುಮಾರ್, ನೀತಾ ರಾಜೇಂದ್ರ ಕುಮಾರ್ ಮತ್ತು ಎಂ.ಎಲ್.ಸಿ. ಕೆ.ಪ್ರತಾಪಸಿಂಹ ನಾಯಕ್ ಸ್ವಾಗತಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next