Advertisement

ನಿಂತಿದ್ದ ಕ್ಯಾಂಟರ್ ಗೆ ಅಪರಿಚಿತ ವಾಹನ ಢಿಕ್ಕಿ: ಸ್ಥಳದಲ್ಲೇ ನಾಲ್ವರು ಸಾವು

12:02 PM Jun 03, 2022 | Team Udayavani |

ಬಾಗಲಕೋಟೆ: ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಮೃತಪಟ್ಟಿರುವ ಘಟನೆ ಜಿಲ್ಲೆಯ ಬೀಳಗಿ ತಾಲ್ಲೂಕಿನ ಬಾಡಗಂಡಿ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ 218ರಲ್ಲಿ ನಡೆದಿದೆ.

Advertisement

ಗುರುವಾರ ತಡರಾತ್ರಿ ರಸ್ತೆಯಲ್ಲಿ ಕ್ಯಾಂಟರ್ ಪಂಚರ್ ಹಾಕಿಸಲು ನಿಂತಿದ್ದ ವೇಳೆ ಅಪರಿಚಿತ ವಾಹನ ಢೀಕ್ಕಿಯಾಗಿ ಸ್ಥಳದಲ್ಲೇ ನಾಲ್ವರು ಸಾವನ್ನಪ್ಪಿದ್ದಾರೆ. ಬೀಳಗಿ ಮೂಲದ ರಜಾಕ್ ತಾಂಬೊಳೆ, ನಾಶಿರ್ ಮುಲ್ಲಾ, ಮಲ್ಲಪ್ಪ ಮಳಲಿ ಹಾಗೂ ರಾಮಸ್ವಾಮಿ ಮೃತಪಟ್ಟವರು.

ಘಟನೆ ಕುರಿತು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ನನಗೆ ಬಹಳ ಆಘಾತ ಹಾಗೂ ದುಃಖವಾಯಿತು. ಈ ದುರಂತ ಸಂಭವಿಸಬಾರದಿತ್ತು. ಆಕಸ್ಮಿಕವಾಗಿ ಸಂಭವಿಸಿದೆ. ಮೃತರ ಆತ್ಮಕ್ಕೆ ದೇವರು ಶಾಂತಿ ಕೊಡಲಿ. ಮೃತರ ಕುಟುಂಬಕ್ಕೆ ಆ ದೇವರು ದುಃಖವನ್ನು ಭರಿಸುವಂತಹ ಶಕ್ತಿ ಕೊಡಲಿ ಅಂತ ಸಚಿವ ಮುರುಗೇಶ್ ನಿರಾಣಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದರು.

ಇದನ್ನೂ ಓದಿ:ಎಟಿಎಂಗೆ ಬರುತ್ತಿದ್ದ ವೃದ್ಧರಿಗೆ ಸಹಾಯ ಮಾಡುವ ನೆಪದಲ್ಲಿ ವಂಚಿಸುತ್ತಿದ್ದವನ ಬಂಧನ

ಅಲ್ಲದೇ, ಮೃತರ ಕುಟುಂಬಕ್ಕೆ ಹಾಗೂ ಅಪಘಾತದಲ್ಲಿ ಗಾಯಗೊಂಡವರಿಗೆ ಸರ್ಕಾರದಿಂದ ಪರಿಹಾರ ಧನ ಸಿಗುವಂತೆ ಕೆಲಸವನ್ನು ಮಾಡುತ್ತೇನೆ ಎಂದಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next