Advertisement

ಉಳ್ಳಾಲ: ಅಪರಿಚಿತ ವಾಹನ ಬೈಕ್ ಗೆ ಢಿಕ್ಕಿ : ಯುವಕ ಸಾವು

01:37 AM Aug 08, 2020 | Hari Prasad |

ಉಳ್ಳಾಲ: ಅಪರಿಚಿತ ವಾಹನ ಢಿಕ್ಕಿ ಹೊಡೆದು ಬೈಕ್ ಸವಾರ ದಾರುಣವಾಗಿ ಸಾವನ್ನಪ್ಪಿರುವ ಘಟನೆ ರಾ.ಹೆ.66ರ ನೇತ್ರಾವತಿ‌ ಸೇತುವೆಯಲ್ಲಿ ಶುಕ್ರವಾರ ತಡರಾತ್ರಿ ವೇಳೆ ಸಂಭವಿಸಿದೆ.

Advertisement

ಹರೇಕಳ ನಿವಾಸಿ ಹಮೀದ್ ಎಂಬವರ ಪುತ್ರ ಶಬೀರ್ (24) ಸಾವನ್ನಪ್ಪಿದವರು.

ಮಂಗಳೂರಿನಿಂದ ಹರೇಕಳದ ಮನೆಗೆ ರಾಯಲ್ ಎನ್ಪೀಲ್ಡ್ ಬೈಕಿನಲ್ಲಿ ತೆರಳುತ್ತಿದ್ದ ಸಂದರ್ಭ ಹಿಂಬದಿಯಿಂದ ಬರುತ್ತಿದ್ದ ಅಪರಿಚಿತ ವಾಹನ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡ ಶಬೀರ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಪ್ರಕರಣ ದಾಖಲಿಸಿಕೊಂಡಿರುವ ನಾಗುರಿ ಸಂಚಾರಿ ಠಾಣಾ ಪೊಲೀಸರು ಢಿಕ್ಕಿ ಹೊಡೆದ ವಾಹನಕ್ಕಾಗಿ ಹುಡುಕಾಟ ಆರಂಭಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next