Advertisement

ಸೋಮವಾರದಿಂದ ಮಹಾರಾಷ್ಟ್ರದ ಧಾರ್ಮಿಕ ಕೇಂದ್ರಗಳು ಭಕ್ತರಿಗೆ ಮುಕ್ತ! ನಿಯಮ ಪಾಲಿಸಲು ಸೂಚನೆ

07:09 PM Nov 14, 2020 | sudhir |

ಮುಂಬೈ: ದೀಪಾವಳಿ ಹೊತ್ತಿನಲ್ಲೇ ಸೋಮವಾರದಿಂದ ಮಹಾರಾಷ್ಟ್ರದಲ್ಲಿನ ಎಲ್ಲಾ ಧಾರ್ಮಿಕ ಕೇಂದ್ರಗಳು ತೆರೆಯಲಿವೆ. ದೇಗುಲಗಳ ತೆರೆಯುವ ವಿಚಾರದಲ್ಲಿ ರಾಜ್ಯಪಾಲರು ಮತ್ತು ಬಿಜೆಪಿ ಪಕ್ಷಗಳು ಉದ್ಧವ್‌ ಠಾಕ್ರೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದವು. ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರದ ಈ ನಿರ್ಧಾರ ಮಹತ್ವ ಪಡೆದುಕೊಂಡಿದೆ.

Advertisement

ಕೊರೊನಾ ಹಿನ್ನೆಲೆಯಲ್ಲಿ ಲಾಕ್‌ಡೌನ್‌ ಘೋಷಣೆಯಾದ ಬಳಿಕ, ಅಂದರೆ ಮಾ.17ರಂದು ಧಾರ್ಮಿಕ ಕೇಂದ್ರಗಳನ್ನು ಮುಚ್ಚಲಾಗಿತ್ತು. ದೇಶದ ಬೇರೆ ಬೇರೆ ದೇಶಗಳಲ್ಲಿ ಎರಡು ತಿಂಗಳ ಹಿಂದೆಯೇ ಓಪನ್‌ ಮಾಡಲಾಗಿತ್ತಾದರೂ, ಮಹಾರಾಷ್ಟ್ರದಲ್ಲಿ ಮಾತ್ರ ಇನ್ನೂ ಬಾಗಿಲು ತೆಗೆದಿರಲಿಲ್ಲ.

ಇದನ್ನೂ ಓದಿ:ಪ್ರಧಾನಿ ಮೋದಿ ಈವರೆಗೆ ಯಾವ ಗಡಿಭಾಗದ ಯೋಧರ ಜತೆ ದೀಪಾವಳಿ ಆಚರಿಸಿದ್ದಾರೆ ಗೊತ್ತಾ?

ಈಗ ಮಹಾರಾಷ್ಟ್ರ ಸರ್ಕಾರವೂ ದೇಗುಲಗಳನ್ನು ತೆರೆಯಲು ನಿರ್ಧರಿಸಿದ್ದು, ಭಕ್ತರು, ಮಾಸ್ಕ್, ಸಾಮಾಜಿಕ ಅಂತರ, ಸ್ಯಾನಿಟೈಸರ್‌ ಹಾಕಿಕೊಂಡು ಹೋಗಬೇಕು ಎಂದು ಸೂಚಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next