Advertisement

ಸಿಎಂ ಅದಿತ್ಯನಾಥ್ ಭೇಟಿ ನೀಡುವವರೆಗೂ ಅಂತ್ಯಸಂಸ್ಕಾರ ಮಾಡಲ್ಲ: ಉನ್ನಾವ್ ಸಂತ್ರಸ್ತೆಯ ಕುಟುಂಬ

09:45 AM Dec 09, 2019 | Mithun PG |

ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಭೇಟಿ ನೀಡುವವರೆಗೂ ಉನ್ನಾವೋ ಅತ್ಯಾಚಾರ ಸಂತ್ರಸ್ತೆಯ ಅಂತ್ಯಸಂಸ್ಕಾರ ಮಾಡುವುದಿಲ್ಲವೆಂದು ಕುಟುಂಬಸ್ಥರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

Advertisement

ಶನಿವಾರ ಸಂಜೆ ಸಂತ್ರಸ್ತೆಯ ಮೃತದೇಹ ಉನ್ನಾವೋ ಗ್ರಾಮವನ್ನು ತಲುಪಿದ್ದು , ಇಂದು ಅಂತ್ಯಸಂಸ್ಕಾರ ನೆರವೇರಿಸಬೇಕಿತ್ತು. ಆದರೇ ಮುಖ್ಯಮಂತ್ರಿ ಭೇಟಿ ನೀಡುವವರೆಗೂ ಅಂತಿಮ ವಿಧಿ ವಿಧಾನಗಳನ್ನು ನೆರವೇರಿಸುವುದಿಲ್ಲವೆಂದು ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ.

ಸಫ್ಜರ್ ಜಂಗ್ ಆಸ್ಪತ್ರೆಯಲ್ಲಿ ಸುಟ್ಟ ಗಾಯಗಳಿಂದ ಜೀವನ್ಮರಣ ಹೋರಾಟ ನಡೆಸಿ ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಶುಕ್ರವಾರ ರಾತ್ರಿ ಕೊನೆಯುಸಿರೆಳೆದಿದ್ದರು. ಆ ಬಳಿಕ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂಪುಟದ ಸಚಿವರು ಸಂತ್ರಸ್ತೆಯ ಮನೆಗೆ ತೆರಳಿ ಸಾಂತ್ವನ ಹೇಳಿದ್ದರು.ಈ ವೇಳೆ ಗ್ರಾಮಾದ್ಯಂತ ಭಾರೀ ಪ್ರತಿಭಟನೆ ವ್ಯಕ್ತವಾಗಿತ್ತು.  ಮಾತ್ರವಲ್ಲದೆ ಸರ್ಕಾರದ ವತಿಯಿಂದ 25 ಲಕ್ಷ ರೂ ಪರಿಹಾರ ಹಾಗೂ ಪ್ರಧಾನ ಮಂತ್ರಿ ಅವಾಸ್ ಯೋಜನೆಯಡಿ ಮನೆ ನಿರ್ಮಾಣ ಮಾಡಿಕೊಡುವ ಕುರಿತು ಭರವಸೆ ಮಾತನಾಡಿದ್ದರು.

ಅತ್ಯಾಚಾರ ನಡೆಸಿ ಆ ಬಳಿಕ ಬೆಂಕಿ ಹಚ್ಚಿ ಕೊಲೆಗೈದ ದುಷ್ಕರ್ಮಿಗಳಿಗೆ ತಕ್ಕ ಶಿಕ್ಷೆಯಾಗುವ ಭರವಸೆಯನ್ನು ಯೋಗಿ ಆದಿತ್ಯನಾಥ್ ನೀಡಿದ ಬಳಿಕವೇ ಅಂತ್ಯಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next