Advertisement

ಉನ್ನಾವ್ ಸಂತ್ರಸ್ತೆ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ, ಮನೆ ನಿರ್ಮಾಣ: ಯೋಗಿ ಅದಿತ್ಯನಾಥ್

09:49 AM Dec 09, 2019 | Team Udayavani |

ಲಕ್ನೋ: ದೆಹಲಿಯ ಸಫ್ಜರ್ ಜಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ  ವೇಳೆ ಮೃತಪಟ್ಟ ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬಕ್ಕೆ ಉತ್ತರಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ 25 ಲಕ್ಷ ರೂ . ಪರಿಹಾರ ನೀಡಿದೆ . ಮಾತ್ರವಲ್ಲದೆ ಪ್ರಕರಣದ ತ್ವರಿತ ವಿಚಾರಣೆಗೆ ಫಾಸ್ಟ್ ಟ್ರ್ಯಾಕ್ ನ್ಯಾಯಾಲಯವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ.

Advertisement

ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಮನೆಗೆ ಶನಿವಾರ ಸಂಜೆ ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರದ ಸಚಿವ ಸ್ವಾಮಿ ಪ್ರಸಾದ ಮೌರ್ಯ ಭೇಟಿ ನೀಡಿ “ ಸಂತ್ರಸ್ತೆಗೆ  ಶೀಘ್ರವೇ ನ್ಯಾಯಾ ದೊರಕಿಸಿಕೊಡಲಾಗುವುದು. ಇದಕ್ಕಾಗಿ  ತ್ವರಿತ ವಿಚಾರಣಾ ನ್ಯಾಯಾಲಯವನ್ನು ಸ್ಥಾಪಿಸಲು ಯೋಗಿ ಅದಿತ್ಯನಾಥ್ ಸರ್ಕಾರ ನಿರ್ಧರಿಸಿದೆ. ಮಾತ್ರವಲ್ಲದೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಕುಟುಂಬಕ್ಕೆ 25 ಲಕ್ಷ ರೂ. ನೀಡಲಾಗುವುದು ಎಂದರು.

ಜೊತೆಗೆ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ (ಪಿಎಂಎವೈ) ಸಂತ್ರಸ್ತೆ ಕುಟುಂಬಕ್ಕೆ ಮನೆಯೊಂದನ್ನು ನಿರ್ಮಿಸಿಕೊಡಲಾಗುವುದು ಎಂದರು. ಸಂತ್ರಸ್ತೆಯ ಮನೆಗೆ ಪ್ರಿಯಾಂಕ ಗಾಂಧಿ, ಉತ್ತರ ಪ್ರದೇಶ ರಾಜ್ಯ ಸಚಿವ ಕಮಲ್ ರಾಣಿ ವರುಣ್ ಮುಂತಾದ ಅನೇಕರು ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

ಘಟನೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಪ್ರಿಯಾಂಕ ಗಾಂಧಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಸಂತ್ರಸ್ತೆಗೆ ನಾವು ನ್ಯಾಯಾ ಕೊಡಿಸಲಾಗಲಿಲ್ಲ. ಇದು ನಮ್ಮೆಲ್ಲರ ವೈಫಲ್ಯ, ನಾವು ಕೂಡ ಇದರಲ್ಲಿ ತಪ್ಪಿತಸ್ಥರು , ಸಂತ್ರಸ್ತೆಗೆ ಶೀಘ್ರವಾಗಿ ನ್ಯಾಯಾ ಕೊಡಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next