Advertisement

Prisoners: ಕೈದಿಗಳ ಅಸಹಜ ಸಾವು: ಪರಿಹಾರಕ್ಕೆ ನೀತಿ

11:12 PM Oct 05, 2023 | Team Udayavani |

ಬೆಂಗಳೂರು: ರಾಜ್ಯದ ಜೈಲುಗಳಲ್ಲಿ ಅಸಹಜವಾಗಿ ಸಾವನ್ನಪ್ಪಿದ ಕೈದಿಗಳ ಅವಲಂಬಿತ ಸಂಬಂಧಿಕರು ಅಥವಾ ಉತ್ತರಾಧಿಕಾರಿಗಳಿಗೆ ಪರಿಹಾರ ನೀಡಲು ನೀತಿಯೊಂದನ್ನು ರೂಪಿಸಲಾಗಿದೆ ಎಂದು ರಾಜ್ಯ ಸರಕಾರ ಹೈಕೋರ್ಟ್‌ಗೆ ತಿಳಿಸಿದೆ.

Advertisement

ವಿಚಾರಣಾಧೀನ ಕೈದಿಗಳ ಅಸಹಜ ಸಾವುಗಳಿಗೆ ಅವರ ಅವಲಂಬಿತರಿಗೆ ಪರಿಹಾರ ನೀಡುವ ವಿಚಾರವಾಗಿ ಸುಪ್ರೀಂಕೋರ್ಟ್‌ ನಿರ್ದೇಶನದಂತೆ ಹೈಕೋರ್ಟ್‌ 2017ರಲ್ಲಿ ದಾಖಲಿಸಿ ಕೊಂಡಿರುವ ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾ| ಪ್ರಸನ್ನ ಬಿ. ವರಾಲೆ ಹಾಗೂ ನ್ಯಾ| ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು.

ಕೈದಿಗಳ ನಡುವಿನ ಹೊಡೆದಾಟ ಅಥವಾ ಘರ್ಷಣೆಯಲ್ಲಿ ಕೈದಿ ಸಾವನ್ನಪ್ಪಿದರೆ ಅವಲಂಬಿತರಿಗೆ 7.50 ಲಕ್ಷ ರೂ. ಹಾಗೂ ಆತ್ಮಹತ್ಯೆ ಮತ್ತು ಅಸಹಜ ಸಾವು ಸಂಭವಿಸಿದರೆ 5 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಸರಕಾರದ ಪರ ವಕೀಲರು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next