Advertisement

ಬರುವವರೆಗೆ ಸುಮ್ಮನಿರಿ: ಸಿಎಂ

11:38 PM Jul 01, 2019 | Team Udayavani |

ಬೆಂಗಳೂರು: ಕಾಂಗ್ರೆಸ್‌ನ ಇಬ್ಬರು ಶಾಸಕರು ರಾಜೀನಾಮೆ ನೀಡುತ್ತಿದ್ದಂತೆ ಎಚ್ಚೆತ್ತ ಮುಖ್ಯಮಂತ್ರಿ ಕುಮಾರಸ್ವಾಮಿ ಅಮೆರಿಕದಿಂದಲೇ ಅತೃಪ್ತ ಶಾಸಕರ ಜತೆ ದೂರವಾಣಿ ಮೂಲಕ ಚರ್ಚಿಸಿ ಮನವೊಲಿಸುವ ಪ್ರಯತ್ನ ನಡೆಸಿದರು.

Advertisement

ಭೀಮಾನಾಯ್ಕ, ಮಹೇಶ್‌ ಕುಮಟಳ್ಳಿ, ಅಮರೇಗೌಡ ಬಯ್ನಾಪುರ, ಬಿ.ಸಿ.ಪಾಟೀಲ್‌ ಸೇರಿ ಕಾಂಗ್ರೆಸ್‌ನ ಅತೃಪ್ತ ಶಾಸಕರನ್ನು ಸಂಪರ್ಕಿಸಿದ ಕುಮಾರಸ್ವಾಮಿ, ಅಮೆರಿಕದಿಂದ ಬರುವವರೆಗೂ ಸುಮ್ಮನಿರಿ ಎಂದು ಮನವಿ ಮಾಡಿದರು.

ಆನಂದ್‌ಸಿಂಗ್‌ ಹಾಗೂ ರಮೇಶ್‌ ಜಾರಕಿಹೊಳಿ ಅವರೊಂದಿಗೆ ಕುಮಾರಸ್ವಾಮಿ ಮಾತನಾಡಿ, ರಾಜೀನಾಮೆ ವಾಪಸ್‌ ಪಡೆಯುವಂತೆ ಕೋರಿದರು. ಆದರೆ, ಪರಿಸ್ಥತಿ ಮೀರಿ ಹೋಗಿದೆ ಎಂದು ಇಬ್ಬರೂ ಶಾಸಕರು ಹೇಳಿದ್ದಾರೆ ಎನ್ನಲಾಗಿದೆ.

ರಾಜ್ಯದಲ್ಲಿನ ವಿದ್ಯಮಾನಗಳ ಹಿನ್ನೆಲೆಯಲ್ಲಿ ಅಮೆರಿಕ ಪ್ರವಾಸ ಮುಂದುವರಿಸಬೇಕಾ? ಅಥವಾ ವಾಪಸ್‌ ಆಗಬೇಕಾ ಎಂಬ ಬಗ್ಗೆ ಕುಮಾರಸ್ವಾಮಿಯವರು ಯೋಚಿಸುತ್ತಿದ್ದು ಪರಿಸ್ಥಿತಿ ಕೈ ಮೀರುವ ಸ್ಥಿತಿ ನಿರ್ಮಾಣವಾದರೆ ಪ್ರವಾಸ ಮೊಕುಗೊಳಿಸಿದರೂ ಆಶ್ಚರ್ಯವಿಲ್ಲ ಎಂದು ಹೇಳಲಾಗುತ್ತಿದೆ.

ಈ ಮಧ್ಯೆ, ಕುಮಾರಸ್ವಾಮಿಯವರು ಟ್ವೀಟ್‌ ಮೂಲಕ ಸಮ್ಮಿಶ್ರ ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ. ವಿಧಾನಸಭೆ ಫ‌ಲಿತಾಂಶದ ದಿನ ಕಾಲಭೈರವೇಶ್ವರನ ಪೂಜೆ ಮಾಡಿದ್ದೆ. ಫ‌ಲಿತಾಂಶ ಬಂದ ನಂತರ ರಾಜಕೀಯ ನಿವೃತ್ತಿಗೆ ಯೋಚಿಸಿದ್ದೆ.

Advertisement

ಆದರೆ, ಕಾಂಗ್ರೆಸ್‌ ನಾಯಕರು ಮಾತುಕತೆಗೆ ಕರೆದರು. ಆಶ್ಚರ್ಯಕರ ರೀತಿಯಲ್ಲಿ ಎರಡನೇ ಬಾರಿ ಮುಖ್ಯಮಂತ್ರಿಯಾದೆ. ಕಾಲಭೈರವೇಶ್ವರನ ಕೃಪೆಯಿಂದಲೇ ಮುಖ್ಯಮಂತ್ರಿ ಸ್ಥಾನ ದೊರೆಯಿತು ಎಂದು ತಿಳಿಸಿದ್ದಾರೆ.

ವೇಣುಗೋಪಾಲ್‌ ಜತೆ ಗೌಡರ ಚರ್ಚೆ: ರಾಜ್ಯ ರಾಜಕೀಯದಲ್ಲಿ ದಿಢೀರ್‌ ಉಂಟಾದ ಬೆಳವಣಿಗೆಗಳ ಬಗ್ಗೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಜತೆ ಚರ್ಚಿಸಿದರು.

ಬೆಳಗ್ಗೆ ಪಕ್ಷದ ಕಚೇರಿಗೆ ಆಗಮಿಸಿ ಮುಖಂಡರ ಜತೆ ಸಮಾಲೋಚನೆ ನಡೆಸಿ ಪದ್ಮನಾಭನಗರ ನಿವಾಸಕ್ಕೆ ತೆರಳಿದ ಗೌಡರು ಇಬ್ಬರು ಶಾಸಕರ ರಾಜೀನಾಮೆಯಿಂದ ಉಂಟಾದ ಬೆಳವಣಿಗೆ ಬಗ್ಗೆ ಹಲವು ನಾಯಕರ ಜತೆ ಚರ್ಚಿಸಿ ಮನೆಯಲ್ಲೇ ಕುಳಿತು ಗಮನಿಸುತ್ತಿದ್ದರು.

ನಂತರ ಅಮೆರಿಕದಲ್ಲಿರುವ ಸಿಎಂ ಕುಮಾರಸ್ವಾಮಿ ಜತೆ ದೂರವಾಣಿ ಮೂಲಕ ಚರ್ಚಿಸಿದರು. ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ.ವೇಣುಗೋಪಾಲ್‌ ಅವರ ಜತೆಯೂ ಸಮಾಲೋಚನೆ ನಡೆಸಿ ವಿದ್ಯಮಾನಗಳ ಮಾಹಿತಿ ನೀಡಿದರು.

ಪಕ್ಷದ ಶಾಸಕರನ್ನು ಹಿಡಿದಿಟ್ಟುಕೊಳ್ಳುವ ಸಂಬಂಧ ಸಚಿವ ಎಚ್‌.ಡಿ.ರೇವಣ್ಣ ಜತೆ ಮಾತನಾಡಿದರು. ಅಗತ್ಯವಾದರೆ ಮಂಗಳವಾರ ಅಥವಾ ಬುಧವಾರ ಶಾಸಕಾಂಗ ಪಕ್ಷದ ಸಭೆ ಕರೆಯಲು ನಿರ್ಧರಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next