Advertisement

UP: ದೇವಾಲಯದೊಳಗೆ ನುಗ್ಗಿ ವಿಗ್ರಹಗಳಿಗೆ ಹಾನಿ: 3 ಮಂದಿಯ ಬಂಧನ

06:39 PM Jul 21, 2024 | Team Udayavani |

ಲಕ್ನೋ: ಉತ್ತರ ಪ್ರದೇಶದ ಇಜತ್‌ನಗರ ಪ್ರದೇಶದಲ್ಲಿರುವ ಗೋಪೇಶ್ವರ ನಾಥ ದೇವಸ್ಥಾನದಲ್ಲಿ ಗಲಾಟೆ ನಡೆಸಿ ವಿಗ್ರಹಗಳಿಗೆ ಹಾನಿ ಮಾಡಿದ ಆರೋಪದ ಮೇಲೆ ಮೂವರನ್ನು ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಬಂಧಿತ ಆರೋಪಿಗಳು ಶಾರುಖ್, ಅರ್ಷದ್ ಮತ್ತು ಅಕ್ರಮ್ ಎಂದು ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.

ಭಾನುವಾರ ಬೆಳಗ್ಗೆ ಆರೋಪಿಗಳು ದೇವಸ್ಥಾನಕ್ಕೆ ಆಗಮಿಸಿ ದೇವತೆಗಳ ವಿಗ್ರಹಗಳನ್ನು ಹಾನಿಗೊಳಿಸಿದ್ದಾರೆ. ಈ ಕುರಿತು ಸ್ಥಳೀಯರು ಮತ್ತು ಹಿಂದೂ ಪರ ಸಂಘಟನೆಗಳು ವ್ಯಾಪಕ ಆಕ್ರೋಶ ಹೊರ ಹಾಕಿವೆ. ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next