Advertisement

UP; ನಿರ್ಲಕ್ಷ್ಯ ತೋರುವ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಯೋಗಿ

04:45 PM Mar 09, 2024 | Team Udayavani |

ಲಕ್ನೋ: ಜನರ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಯಾವುದೇ ನಿರ್ಲಕ್ಷ್ಯ ತೋರುವ ಅಧಿಕಾರಿಗಳಿಗೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಎಚ್ಚರಿಕೆ ನೀಡಿದ್ದು, ಸಮಸ್ಯೆಗಳನ್ನು ಪರಿಹರಿಸುವುದು ಮತ್ತು ಅದರ ತ್ವರಿತ, ಪಾರದರ್ಶಕ ಮತ್ತು ತೃಪ್ತಿಕರ ವಿಲೇವಾರಿಯನ್ನು ಖಚಿತಪಡಿಸುವುದು ತಮ್ಮ ಸರಕಾರದ ಆದ್ಯತೆಯಾಗಿದೆ ಎಂದು ಒತ್ತಿ ಹೇಳಿದ್ದಾರೆ.

Advertisement

ಗೋರಖನಾಥ ದೇಗುಲದ ಸಂಕೀರ್ಣದಲ್ಲಿರುವ ಮಹಂತ್ ದಿಗ್ವಿಜಯನಾಥ್ ಸ್ಮೃತಿ ಭವನದ ಹೊರಗೆ ನಡೆದ ಜನತಾ ದರ್ಶನದಲ್ಲಿ ಸುಮಾರು 500 ಜನರ ಸಮಸ್ಯೆಗಳನ್ನು ಆಲಿಸಿದ ಸಿಎಂ ಆದಿತ್ಯನಾಥ್ ಅವರು ಅಧಿಕಾರಿಗಳಿಗೆ ಈ ಸೂಚನೆಗಳನ್ನು ನೀಡಿದ್ದಾರೆ ಎಂದು ಉತ್ತರ ಪ್ರದೇಶ ಸರಕಾರ ಹೇಳಿಕೆಯಲ್ಲಿ ತಿಳಿಸಿದೆ.

ಜನರ ಅರ್ಜಿಗಳನ್ನು ಸಂಬಂಧಪಟ್ಟ ಅಧಿಕಾರಿಗಳಿಗೆ ಉಲ್ಲೇಖಿಸಿದ ಸಿಎಂ ಆದಿತ್ಯನಾಥ್ ಅವರು, ಎಲ್ಲಾ ಸಮಸ್ಯೆಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವಂತೆ ಸೂಚನೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next