Advertisement

ಯುಪಿ ಸಿಎಂ ಯೋಗಿ ಆದಿತ್ಯನಾಥ್‌ಗೆ ಕೊಲೆ ಬೆದರಿಕೆ

07:59 PM May 22, 2020 | Sriram |

ಲಕ್ನೋ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರನ್ನು ಕೊಲೆ ಮಾಡುವುದಾಗಿ ದುಷ್ಕರ್ಮಿಯೊಬ್ಬ ವಾಟ್ಸ್‌ಅಪ್‌ ಸಂದೇಶದಲ್ಲಿ ಬೆದರಿಕೆ ಹಾಕಿದ್ದಾನೆ.

Advertisement

ಗುರುವಾರ ರಾತ್ರಿ ಪೊಲೀಸ್‌ ಮುಖ್ಯ ಕಚೇರಿಯ ವಾಟ್ಸ್‌ಅಪ್‌ ಸಂಖ್ಯೆಗೆ ಬೆದರಿಕೆಯ ಸಂದೇಶವನ್ನು ಕಳುಹಿಸಿದ್ದು ಕೆಟ್ಟ ಪದಗಳಿಂದ ಯೋಗಿ ಆದಿತ್ಯನಾಥ್‌ ಅವರನ್ನು ನಿಂದಿಸಿದ್ದಾನೆ, ಮಾತ್ರವಲ್ಲ ಮುಖ್ಯಮಂತ್ರಿಯನ್ನು ಬಾಂಬ್‌ ಸ್ಫೋಟಿಸಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ.

ಗೋಮತಿ ನಗರದ ಪೊಲೀಸರು ಸ್ವಯಂ ಎಫ್ಐಆರ್‌ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮೊಬೈಲ್‌ ನಂಬರ್‌ ಯಾರ ಹೆಸರಿನಲ್ಲಿದೆ ಎನ್ನುವುದನ್ನು ಪೊಲೀಸರು ಶೋಧಿಸುತ್ತಿದ್ದಾರೆ. ದುಷ್ಕರ್ಮಿಯ ಬಗ್ಗೆ ಸುಳಿವು ಸಿಕ್ಕಿದೆ, ಶೀಘ್ರದಲ್ಲೇ ಬಂಧಿಸುವುದಾಗಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next