Advertisement

ಉತ್ತರಾಖಂಡ್: ಹುಟ್ಟೂರಿಗೆ ಭೇಟಿ ನೀಡಿ ತಾಯಿ ಆಶೀರ್ವಾದ ಪಡೆದ ಯೋಗಿ ಆದಿತ್ಯನಾಥ್

10:22 AM May 04, 2022 | Team Udayavani |

ಲಕ್ನೋ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ಹುಟ್ಟೂರಾದ ಉತ್ತರಾಖಂಡ್ ನ ಪೌರಿ ಜಿಲ್ಲೆಯ ಪಂಚೌರ್ ಗ್ರಾಮಕ್ಕೆ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದಿದ್ದಾರೆ. ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಅವರು ತಮ್ಮ ಪೂರ್ವಜರ ಗ್ರಾಮಕ್ಕೆ ಮೊದಲ ಬಾರಿ ಭೇಟಿ ನೀಡಿದ್ದು, ತಾಯಿ ಮತ್ತು ಸಂಬಂಧಿಕರ ಜತೆ ಕುಶಲೋಪರಿ ನಡೆಸಿರುವುದಾಗಿ ವರದಿ ತಿಳಿಸಿದೆ.

Advertisement

ತಾಯಿಯನ್ನು ಭೇಟಿಯಾಗಿ ಅವರ ಪಾದ ಮುಟ್ಟಿ ಆಶೀರ್ವಾದ ಪಡೆಯುತ್ತಿರುವ ಫೋಟೋವನ್ನು ಯೋಗಿ ಆದಿತ್ಯನಾಥ್ ಟ್ವೀಟರ್ ಖಾತೆಯಲ್ಲಿ ಬುಧವಾರ (ಮೇ 04) ಹಂಚಿಕೊಂಡಿದ್ದಾರೆ. ಹಿಂದಿಯಲ್ಲಿ “ಮಾ” (ತಾಯಿ) ಎಂದು ಅಡಿಬರಹ ನೀಡಿರುವ ಟ್ವೀಟ್ ಗೆ ಸಾವಿರಾರು ಲೈಕ್ಸ್ ಬಂದಿದೆ.

ಪಿಟಿಐ ವರದಿ ಪ್ರಕಾರ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮಂಗಳವಾರ ರಾತ್ರಿ ತಮ್ಮ ಹುಟ್ಟೂರಿನಲ್ಲಿ ವಾಸ್ತವ್ಯ ಹೂಡಿದ್ದರು. ಬುಧವಾರ ತನ್ನ ಸೋದರಳಿನ ಕೇಶ ಮುಂಡನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದೆ. ಉತ್ತರಾಖಂಡ್ ದಲ್ಲಿ ರಾಜಕೀಯ ಕಾರ್ಯಕ್ರಮದಲ್ಲೂ ಭಾಗವಹಿಸಿ, ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ವರದಿ ವಿವರಿಸಿದೆ.

ಯೋಗಿ ಆದಿತ್ಯನಾಥ್ ಅವರು ಹಲವಾರು ವರ್ಷಗಳ ನಂತರ ತಮ್ಮ ಹುಟ್ಟೂರಿಗೆ ಮೊದಲ ಬಾರಿ ಭೇಟಿ ನೀಡಿರುವುದಾಗಿ ಅಧಿಕಾರಿಗಳು ತಿಳಿಸಿರುವುದಾಗಿ ವರದಿ ಹೇಳಿದೆ. 2020, ಏಪ್ರಿಲ್ 21ರಂದು ಯೋಗಿ ಅವರ ತಂದೆ ಆನಂದ್ ಬಿಶ್ತ್ ಅವರು ತೀರಿಕೊಂಡ ಸಂದರ್ಭದಲ್ಲಿ (ದೇಶಾದ್ಯಂತ ಕೋವಿಡ್ ಸೋಂಕು ಹೆಚ್ಚಳವಾದ ಕಾರಣ) ಯೋಗಿ ಆದಿತ್ಯನಾಥ್ ಅವರು ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲವಾಗಿತ್ತು ಎಂದು ವರದಿ ತಿಳಿಸಿದೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next