Advertisement

ESMA ಹೇರುವ ಮೂಲಕ ಉ.ಪ್ರ. ಸರ್ಕಾರ 500 ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಿದೆ: ಪ್ರಿಯಾಂಕ

02:28 PM Jul 29, 2021 | Team Udayavani |

ಉತ್ತರ ಪ್ರದೇಶ : ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ(ಇ ಎಸ್ ಎಮ್ ಎ) ಹೇರುವ ಮೂಲಕ ಉತ್ತರ ಪ್ರದೇಶ ಸರ್ಕಾರ 500ಕ್ಕೂ ಹೆಚ್ಚು ಕಾರ್ಮಿಕರನ್ನು ಕೆಲಸದಿಂದ ತೆಗೆದು ಹಾಕಲಾಗಿದೆ ಎಂದು ಕಾಂಗ್ರೆಸ್ ನಾಯಕಿ ಮತ್ತು ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಇಂದು(ಗುರುವಾರ, ಜುಲೈ 29) ಆರೋಪಿಸಿದ್ದಾರೆ.

Advertisement

ಇದನ್ನೂ ಓದಿ :  ‘ಕೆಜಿಎಫ್’ ಅಡ್ಡಾಗೆ ಖಡ್ಗ ಹಿಡಿದು ಎಂಟ್ರಿ ಕೊಟ್ಟ ‘ಅಧೀರ’: ಸಂಜು ಬಾಬಾ ರಗಡ್ ಲುಕ್ ರಿಲೀಸ್

ಈ ಕುರಿತು ತಮ್ಮ ಅಧಿಕೃತ ಟ್ವೀಟರ್ ಖಾತೆಯ ಮೂಲಕ ಟ್ವೀಟ್ ಮಾಡಿರುವ ಅವರು, ಉತ್ತರಪ್ರದೇಶದಲ್ಲಿ ಕೋವಿಡ್ 19 ಸಂದರ್ಭದಲ್ಲಿ, ಆ್ಯಂಬ್ಯುಲೆನ್ಸ್ ಕಾರ್ಮಿಕರ ಮೇಲೆ ಹೂ ಮಳೆ ಸುರಿಸುವ ಬಗ್ಗೆ ಸರ್ಕಾರ ಮಾತನಾಡುತ್ತಿತ್ತು. ಆದರೆ, ಅವರು (ಕಾರ್ಮಿಕರು) ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತಿದ ಕೂಡಲೇ, ಸರ್ಕಾರವು ಅವರ ವಿರುದ್ಧ ತನ್ನ ನಿಲುವು ಬದಲಾಯಿಸಿಕೊಂಡಿದೆ.   ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆ(ಇ ಎಸ್ ಎಮ್ ಎ) ಹೇರುವ ಮೂಲಕ ಸರ್ಕಾರ 500 ಕ್ಕೂ ಹೆಚ್ಚು ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಇದರಿಂದ 500 ಮಂದಿಯ ಕುಟುಂಬ ಸಂಕಷ್ಟದಲ್ಲಿದೆ. ದೇವರು ಇಂತಹ ಸರ್ಕಾರದಿಂದ ರಾಜ್ಯವನ್ನು ಉಳಿಸುತ್ತಾನೆಯೇ ಎಂದು ಕೇಳಿದ್ದಾರೆ.

ಇತ್ತೀಚೆಗೆ, ಅಂದರೇ, ಮೇ 27, 2021 ರಂದು ಉತ್ತರ ಪ್ರದೇಶ ಸರ್ಕಾರವು ಅಗತ್ಯ ಸೇವೆಗಳ ನಿರ್ವಹಣಾ ಕಾಯ್ದೆಯನ್ನು (ಇ ಎಸ್ ಎಮ್ ಎ) ಉತ್ತರಪ್ರದೇಶದಲ್ಲಿ ಜಾರಿಗೆ ತಂದಿದೆ.

ಇದನ್ನೂ ಓದಿ : ಬೊಮ್ಮಾಯಿ ರಾಜ್ಯ‘ಭಾರ’..! ತಂದೆಗಾದ ಸ್ಥಿತಿ ಮಗನಿಗೂ ಆಗಬಹುದೇ..?

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next