Advertisement

ಕೇಂದ್ರ ಮಾಜಿ ಸಚಿವರ ವಿರುದ್ಧ ದೂರಿ ನಾಪತ್ತೆಯಾಗಿದ್ದ ವಿದ್ಯಾರ್ಥಿನಿ ರಾಜಸ್ಥಾನದಲ್ಲಿ ಪತ್ತೆ

09:34 AM Aug 31, 2019 | Nagendra Trasi |

ಲಕ್ನೋ: ಇತ್ತೀಚೆಗೆ ಕೇಂದ್ರ ಮಾಜಿ ಸಚಿವ ಸ್ವಾಮಿ ಚಿನ್ಮಯಾನಂದ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ್ದ ಬಳಿಕ ನಾಪತ್ತೆಯಾಗಿದ್ದ ಉತ್ತರ ಪ್ರದೇಶದ ಕಾನೂನು ವಿದ್ಯಾರ್ಥಿನಿ ರಾಜಸ್ಥಾನದಲ್ಲಿ ಗೆಳೆಯನ ಜತೆ ಪತ್ತೆಯಾಗಿರುವುದಾಗಿ ಉತ್ತರಪ್ರದೇಶ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

Advertisement

ಇಂದು ಬೆಳಗ್ಗೆ ರಾಜಸ್ಥಾನದಲ್ಲಿ ಯುಪಿ ಪೊಲೀಸರ ತಂಡ ಪತ್ತೆಹಚ್ಚಿರುವುದಾಗಿ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. ಕೇಂದ್ರ ಮಾಜಿ ಸಚಿವ ಸ್ವಾಮಿ ಚಿನ್ಮಯಾನಂದ ವಿರುದ್ಧ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿದ್ದ ವಿಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ಭರ್ಜರಿ ಸದ್ದು ಮಾಡುವ ಮೂಲಕ ರಾಷ್ಟ್ರೀಯ ಮಾಧ್ಯಮಗಳ ಗಮನ ಸೆಳೆದಿತ್ತು. ಬಳಿಕ ಯುವತಿ ನಾಪತ್ತೆಯಾಗಿದ್ದಳು. ತದನಂತರ ಮಗಳು ನಾಪತ್ತೆಯಾಗಲು ಸ್ವಾಮಿ ಚಿನ್ಮಯಾನಂದ ಕಾರಣ ಎಂದು ತಂದೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಪ್ರಕರಣದ ಜಾಡು ಹಿಡಿದು ಹೊರಟ ಶಹಜಾನ್ ಪುರ್ ಪೊಲೀಸರ ತಂಡಕ್ಕೆ ಕಾನೂನು ವಿದ್ಯಾರ್ಥಿನಿ ತನ್ನ ಗೆಳೆಯನ ಜತೆ ರಾಜಸ್ಥಾನದಲ್ಲಿ ಪತ್ತೆಯಾಗಿರುವುದಾಗಿ ತಿಳಿಸಿದ್ದು, ಇನ್ನಷ್ಟೇ ಸೂಕ್ತ ಕ್ರಮ ಕೈಗೊಳ್ಳಬೇಕಾಗಿದೆ ಎಂದು ವರದಿ ಹೇಳಿದೆ.

Advertisement

Udayavani is now on Telegram. Click here to join our channel and stay updated with the latest news.

Next