Advertisement

ಕೋವಿಡ್ ನಿಂದ ಉತ್ತರ ಪ್ರದೇಶ ಸಚಿವ ವಿಜಯ್ ಕಾಶ್ಯಪ್ ನಿಧನ: ಪ್ರಧಾನಿ ಸಂತಾಪ

10:29 AM May 19, 2021 | Team Udayavani |

ಲಕ್ನೋ: ಉತ್ತರಪ್ರದೇಶದ ಕಂದಾಯ ಮತ್ತು ಪ್ರವಾಹ ನಿಯಂತ್ರಣ ಖಾತೆ ಸಚಿವರಾಗಿದ್ದ ವಿಜಯ್ ಕಾಶ್ಯಪ್ ಕೋವಿಡ್ ಸೋಂಕಿನಿಂದ ಮಂಗಳವಾರ(ಮೇ 18) ಗುರ್ಗಾಂವ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ವರದಿ ತಿಳಿಸಿದೆ.

Advertisement

ಇದನ್ನೂ ಓದಿ:ಗುಂಡಿಯಿಂದ ಮೇಲೆತ್ತಿದ ಜೆಸಿಬಿ ವಿರುದ್ಧವೇ ತಿರುಗಿ ನಿಂತ ಸಲಗ

ವಿಜಯ್ ಕಾಶ್ಯಪ್ (56) ಅವರು ಮುಜಾಫರ್ ನಗರದ ಚಾರ್ತಾವಾಲ್ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. ಗುರ್ಗಾಂವ್ ನ ಮೇದಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿರುವುದಾಗಿ ಆಸ್ಪತ್ರೆಯ ವೈದ್ಯಾಧಿಕಾರಿ ತಿಳಿಸಿದ್ದಾರೆ.

ಕೋವಿಡ್ 2ನೇ ಅಲೆಯಲ್ಲಿ ಸೋಂಕಿನಿಂದ ಮೃತರಾದ ಉತ್ತರಪ್ರದೇಶದ ಐದನೇ ಬಿಜೆಪಿ ಶಾಸಕರು ಇವರಾಗಿದ್ದಾರೆ. ಸಚಿವ ವಿಜಯ್ ಕಾಶ್ಯಪ್ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಸಚಿವ ವಿಜಯ್ ಕಾಶ್ಯಪ್ ಜೀ ಅವರ ನಿಧನದ ಸುದ್ದಿಯಿಂದ ತುಂಬಾ ದುಃಖವಾಗಿದೆ. ಅವರು ತಮ್ಮ ಜೀವನವನ್ನು ಸಾರ್ವಜನಿಕರ ಸೇವೆಗಾಗಿ ಮುಡಿಪಾಗಿಟ್ಟಿದ್ದರು. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ಪ್ರಧಾನಿ ಟ್ವೀಟ್ ಮಾಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next