Advertisement

Gangavathi:ಎ.30 ರಂದು ಯು.ಪಿ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಬಿಜೆಪಿ ಪರ ಭರ್ಜರಿ ಪ್ರಚಾರ

03:44 PM Apr 28, 2023 | Team Udayavani |

ಗಂಗಾವತಿ: ವಿಧಾನಸಭಾ ಕ್ಷೇತ್ರದ ಚುನಾವಣೆ ರಂಗೇರುತ್ತಿದ್ದು ಎ. 30 ರಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಗಂಗಾವತಿಗೆ ಭೇಟಿ ನೀಡಿ ವ್ಯಾಪಕ ಪ್ರಚಾರವನ್ನು ನಡೆಸಲಿದ್ದಾರೆಂದು ಶಾಸಕ ಹಾಗೂ ಬಿಜೆಪಿ ಅಭ್ಯರ್ಥಿ ಪರಣ್ಣ ಮುನವಳ್ಳಿ ತಿಳಿಸಿದ್ದಾರೆ.

Advertisement

ಅವರು ಶುಕ್ರವಾರ ತಮ್ಮ ನಿವಾಸದಲ್ಲಿ  ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇತಿಹಾಸ ಪ್ರಸಿದ್ಧ ಕಿಸ್ಕಿಂದ ಅಂಜನಾದ್ರಿ ಇರುವ ಕಾರಣ ಗಂಗಾವತಿ ಮತಕ್ಷೇತ್ರ ಅತ್ಯಂತ ಪ್ರತಿಷ್ಠೆಯ ಕಣವಾಗಿದೆ. ಸರ್ಕಾರದ. ಕೋಟ್ಯಾಂತರ ರೂ ಅನುದಾನದಲ್ಲಿ ಗಂಗಾವತಿಯ ಸಮಗ್ರ ಅಭಿವೃದ್ಧಿ ಬಿಜೆಪಿ ಸರ್ಕಾರದಲ್ಲಿ ಆಗಿರುವುದರಿಂದ ಮತ್ತೊಮ್ಮೆ ಇಲ್ಲಿಯ ಮತದಾರ ಬಿಜೆಪಿಯ ಪರವಾಗಿದ್ದು ಇದನ್ನು ದೃಢೀಕರಿಸಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎ 30ರಂದು 11 ಗಂಟೆಗೆ ಗಂಗಾವತಿ ನಗರಕ್ಕೆ ಆಗಮಿಸಿ ರೋಡ್ ಶೋ ಮತ್ತು ಬಹಿರಂಗ ಪ್ರಚಾರ ಭಾಷಣ ಮಾಡಲಿದ್ದಾರೆ.

ಚಿತ್ರನಟ ಸ್ಟಾರ್ ಕ್ಯಾಂಪೇನರ್ ಕಿಚ್ಚ ಸುದೀಪ್ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪ್ರವಾಸ ದಿನಾಂಕ ನಿಗದಿಯಾಗಿದ್ದು, ಇನ್ನು ಅಧಿಕೃತವಾಗಿಲ್ಲ. ಇನ್ನು ಅನೇಕ ಬಿಜೆಪಿ ಮತ್ತು ಹಿರಿಯ ಮುಖಂಡರು ಪ್ರಚಾರ ಸಭೆಗೆ ಆಗಮಿಸಲಿದ್ದು, ಮತದಾರ ಪ್ರಭುಗಳಿಗೆ  ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರುವಂತೆ ಮನವಿ ಮಾಡಲಿದ್ದಾರೆ.

ಸಚಿವ ಬಿ ರಾಮುಲು ಅವರು ಎ 29ರಂದು ಬೆಳ್ಳಿಗ್ಗೆ 10 ಗಂಟೆಗೆ ಗಂಗಾವತಿಗೆ ಆಗಮಿಸಿ ಬಿಜೆಪಿ ಪರ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಶಂಕ್ರಣ್ಣ ಮುನವಳ್ಳಿ, ವೀರಭದ್ರಪ್ಪ ನಾಯಕ, ಜೋಗದ ಹನುಮಂತಪ್ಪ ನಾಯಕ, ಕಾಶಿನಾಥ ಸೇರಿ ಅನೇಕರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next