Advertisement

ಬೇಲ್ ಪಡೆದ ಅತ್ಯಾಚಾರ ಆರೋಪಿ ಟ್ರ್ಯಾಕ್ಟರ್ ಹರಿಸಿ ಸಂತ್ರಸ್ತೆ ಮತ್ತು ತಾಯಿ ಹತ್ಯೆಗೈದ!

05:59 PM Jul 20, 2020 | Nagendra Trasi |

ಲಕ್ನೋ:ಅತ್ಯಾಚಾರ ಪ್ರಕರಣದಲ್ಲಿ ಜೈಲುಪಾಲಾಗಿ ಜಾಮೀನಿನ ಮೇಲೆ ಹೊರಬಂದಿದ್ದ ಅಪರಾಧಿ ಅತ್ಯಾಚಾರಕ್ಕೊಳಗಾಗಿದ್ದ ಯುವತಿ ಹಾಗೂ ಆಕೆಯ ತಾಯಿಯ ಮೇಲೆ ಟ್ರ್ಯಾಕ್ಟರ್ ಹರಿಸಿ ಹತ್ಯೆಗೈದಿರುವ ಘಟನೆ ಉತ್ತರಪ್ರದೇಶದ ಕಾಸ್ಗಂಜ್ ಪ್ರದೇಶದಲ್ಲಿ ನಡೆದಿದೆ.

Advertisement

ಕೊಲೆ ಘಟನೆ ನಡೆದ ಮರುದಿನವೇ ಆರೋಪಿಯನ್ನು ಬಂಧಿಸಿದ್ದು, ಕೊಲೆ ಮೊಕದ್ದಮೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಯನ್ನು ಯಶ್ ವೀರ್ ಎಂದು ಗುರುತಿಸಲಾಗಿದೆ.

ಸಂತ್ರಸ್ತೆ ಕುಟುಂಬ ಮತ್ತು ಆರೋಪಿ ಕುಟುಂಬದ ನಡುವಿನ ದ್ವೇಷವೇ ಕೊಲೆಗೆ ಕಾರಣ ಎಂದು ಕಾಸ್ಗಂಜ್ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿರುವುದಾಗಿ ವರದಿ ತಿಳಿಸಿದೆ.

ಕೆಲವು ವರ್ಷಗಳ ಹಿಂದೆ ಹಣಕಾಸಿನ ವಿಚಾರದಲ್ಲಿ ಯಶ್ ವೀರ್ ತಂದೆ ಮಹಾವೀರ್ ರಜಪೂತ್ ಅವರನ್ನು ಅತ್ಯಾಚಾರ ಸಂತ್ರಸ್ತೆ ತಂದೆ ಹಾಗೂ ಚಿಕ್ಕಪ್ಪ ಹತ್ಯೆಗೈದು ಜೈಲು ಸೇರಿದ್ದರು. ಈ ಸಂದರ್ಭದಲ್ಲಿ ಮಹಾವೀರ್ ಪುತ್ರ ಯಶ್ ವೀರ್ ಅತ್ಯಾಚಾರ ಎಸಗಿರುವುದಾಗಿ ಯುವತಿ(ಯಶ್ ವೀರ್ ತಂದೆ ಹತ್ಯೆಗೈದ ಆರೋಪಿಯ ಪುತ್ರಿ) ದೂರು ನೀಡಿದ್ದಳು.

ಈ ತನಿಖೆ ನಡೆಸಿದ ಪೊಲೀಸರು ಯಶ್ ವೀರ್ ನನ್ನು ಬಂಧಿಸಿದ್ದರು. ಈತನೂ ಜೈಲುಶಿಕ್ಷೆ ಅನುಭವಿಸಿದ್ದು, ಇತ್ತೀಚೆಗಷ್ಟೇ ಜಾಮೀನು ಪಡೆದು ಹೊರಬಂದಿದ್ದ. ವರದಿಯ ಪ್ರಕಾರ, ತಂದೆಯ ಹತ್ಯೆಯ ಪ್ರತೀಕಾರಕ್ಕಾಗಿ ಯಶ್ ವೀರ್ ಸಂತ್ರಸ್ತೆ ಮತ್ತು ಆಕೆಯ ತಾಯಿ ಮೇಲೆ ಟ್ರ್ಯಾಕ್ಟರ್ ಹತ್ತಿಸಿ ಹತ್ಯೆಗೈದಿರುವುದಾಗಿ ವರದಿ ತಿಳಿಸಿದೆ. ನಂತರ ಸ್ಥಳೀಯರ ಪ್ರತಿಭಟನೆ ನಡೆಸಿದ್ದು, ಮರುದಿನ ಆರೋಪಿ ಯಶ್ ವೀರ್ ನನ್ನು ಬಂಧಿಸಿರುವುದಾಗಿ ವರದಿ ತಿಳಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next