Advertisement

UP ಸಾರಿಗೆ ಬಸ್ಸು, ಎಸ್‌ಯುವಿ ಢಿಕ್ಕಿ: 6 ಸಾವು, 13 ಮಂದಿಗೆ ಗಾಯ

12:19 PM Nov 09, 2018 | Team Udayavani |

ಸಂಭಾಲ್‌, ಉತ್ತರ ಪ್ರದೇಶ : ಗಿನ್ನೋರ್‌ ಪ್ರದೇಶದಲ್ಲಿ ರಾಜ್ಯ ಸಾರಿಗೆ ಬಸ್ಸೊಂದು ಎಸ್‌ಯುವಿ ವಾಹನವೊಂದಕ್ಕೆ ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಮೃತಪಟ್ಟು ಇತರ 13 ಮಂದಿ ಗಾಯಗೊಂಡಿರುವ ಘಟನೆ ಇಂದು ಶುಕ್ರವಾರ ಬೆಳಗ್ಗೆ ನಡೆದಿದೆ.

Advertisement

ಮೊರಾದಾಬಾದ್‌-ಆಗ್ರಾ ಹೈವೇಯಲ್ಲಿ ಈ ಅವಘಡ ಸಂಭವಿಸಿತು. ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು ಅವರೆಲ್ಲ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. 

ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next