Advertisement

Kannada Movie: ಕಡಲೂರ ಪ್ರೇಮ ಪುರಾಣ “ಕಡಲೂರ ಕಣ್ಮಣಿ”

02:51 PM Jul 16, 2024 | Team Udayavani |

ಹೀಗೊಂದು ಸಿನಿಮಾ ಬಿಡುಗಡೆಯ ಹಂತಕ್ಕೆ ಬಂದಿದ್ದು, ಜು.19ರಂದು ತೆರೆಕಾಣುತ್ತಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್‌ ಬಿಡುಗಡೆಯಾಯಿತು. “ಕಡಲೂರ ಕಣ್ಮಣಿ’ ಪ್ರೇಮಕಥಾಹಂದರ ಹೊಂದಿರುವ ಚಿತ್ರ.

Advertisement

ಈವರೆಗೂ ಸಾಕಷ್ಟು ಪ್ರೇಮಕಥೆಗಳು ಬಂದಿವೆಯಾದರೂ ಇದು ವಿಭಿನ್ನ ಪ್ರೇಮಕಥೆ ಎನ್ನಬಹುದು. ಕಡಲಿನಲ್ಲಿ ಮುತ್ತು ಸಿಗುವುದು ಎಲ್ಲರಿಗೂ ತಿಳಿದ ಸಂಗತಿ ನನಗೂ ಸಹ ಈ ಈ ಚಿತ್ರದಲ್ಲಿ ಮೂರು ಮುತ್ತುಗಳು ಸಿಕ್ಕಿದೆ. ಅದು ನಮ್ಮ ಚಿತ್ರದ ನಾಯಕ, ನಾಯಕಿ ಹಾಗೂ ನಿರ್ಮಾಪಕರು. ಇವರ ಹಾಗೂ ಇಡೀ ತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ಚಿತ್ರ ಜುಲೈ 19 ರಂದು ತೆರೆಗೆ ಬರಲಿದೆ. ಇದೇ ತಂಡದೊಂದಿಗೆ ಕಡಲೂರ ಕಣ್ಮಣಿ ಎರಡನೇ ಭಾಗದಲ್ಲಿ ತರುವ ಸಿದ್ಧತೆ ನಡೆಯುತ್ತಿದೆ’ ಎಂದು ಚಿತ್ರಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನವನ್ನು ಮಾಡಿರುವ ರಾಮ್‌ ಪ್ರಸನ್ನ ಹುಣಸೂರು ತಿಳಿಸಿದರು.

ಅರ್ಜುನ್‌ ನಗರ್‌ಕರ್‌ ಈ ಚಿತ್ರದ ನಾಯಕ. “ವರ್ಣಪಟಲ ಸೇರಿದಂತೆ ಕೆಲವು ಚಿತ್ರಗಳಲ್ಲಿ ಅಭಿನಯಿಸಿರುವ ನನಗೆ ನಾಯಕನಾಗಿ ಇದು ಮೊದಲ ಚಿತ್ರ. ಅವಕಾಶ ನೀಡಿದ ನಿರ್ದೇಶಕ ಹಾಗು ನಿರ್ಮಾಪಕರಿಗೆ ಧನ್ಯವಾದ’ ಎಂದರು.

“ನಾವು ಬ್ಯಾಂಕ್‌ ಉದ್ಯೋಗಿಗಳು. ಜೊತೆಗೆ ಆಪ್ತಮಿತ್ರರು. ರಾಮ್‌ ಪ್ರಸನ್ನ ಹೇಳಿದ ಕಥೆ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆವು’ ಎನ್ನುವುದು ಕೊಳ ಶೈಲೇಶ್‌ ಆರ್‌ ಪೂಜಾರಿ, ಬಸವರಾಜ್‌ ಗಚ್ಚಿ ಅವರ ಮಾತು. ಚಿತ್ರದ ಆಕ್ಷನ್‌ ಸನ್ನಿವೇಶಗಳ ಬಗ್ಗೆ ಚಂದ್ರು ಬಂಡೆ ಮಾಹಿತಿ ನೀಡಿದರು. ಡಿಎಸ್‌ಕೆ ಸಿನಿಮಾಸ್‌ ಮೂಲಕ ಚಿತ್ರ ಬಿಡುಗಡೆ ಯಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next