Advertisement

ದಾಸನ ಕಳಕಳಿಗೆ ಬುದ್ಧಿವಂತನ ಬೆಂಬಲ: ಆಫ್ರಿಕನ್ ಆನೆ ದತ್ತು ಪಡೆದ ಉಪೇಂದ್ರ

01:12 PM Jun 11, 2021 | Team Udayavani |

ಬೆಂಗಳೂರು: ಸಂಕಷ್ಟದಲ್ಲರುವ ಮೃಗಾಲಯದಲ್ಲಿರುವ ಪ್ರಾಣಿ,ಪಕ್ಷಿಗಳನ್ನು ದತ್ತು ಪಡೆಯಲು ನಟ ದರ್ಶನ್‌ ನೀಡಿದ ಕರೆಗೆ ಎಲ್ಲಡೆಯಿಂದ ಉತ್ತಮ ಸ್ಪಂದನೆ ಸಿಕ್ಕಿದೆ.

Advertisement

ಸ್ಯಾಂಡಲ್ವುಡ್ ಯಜಮಾನ ದಚ್ಚು ಕರೆಗೆ ಓಗೊಟ್ಟ ಅವರ ಅಭಿಮಾನಿಗಳು, ಚಿತ್ರರಂಗದ ಸ್ನೇಹಿತರು, ಆಪ್ತರು ನೆರವಿನ ಹಸ್ತ ಚಾಚಿದ್ದು, ರಾಜ್ಯದಲ್ಲಿರುವ 9 ಮೃಗಾಲಯದಲ್ಲಿರುವ ಪ್ರಾಣಿ-ಪಕ್ಷಿಗಳನ್ನು ದತ್ತ ಪಡೆದಿದ್ದಾರೆ. ಇದರಿಂದ ಪ್ರಾಣಿ ಸಂಗ್ರಹಾಲಯಗಳಿಗೆ ಸುಮಾರು ಒಂದು ಕೋಟಿ ರೂಪಾಯಿಯಷ್ಟು ಹಣ ಸಂಗ್ರಹಗೊಂಡಂತಾಗಿದೆ.

ಇದೀಗ ದಾಸನ ಮನವಿಗೆ ಚಂದನವನದ ಬುದ್ಧಿವಂತ ನಟ ನಿರ್ದೇಶಕ ಉಪೇಂದ್ರ ಅವರೂ ಕೈ ಜೋಡಿಸಿದ್ದಾರೆ. ಉಪ್ಪಿ ಮೈಸೂರು ಮೃಗಾಲಯದಲ್ಲಿನ ಆಫ್ರಿಕನ್‌ ಆನೆಯೊಂದನ್ನು ದತ್ತು ಪಡೆದಿದ್ದಾರೆ.

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಆಫ್ರಿಕನ್ ಆನೆ ದತ್ತು ಪಡೆದ ಪ್ರಮಾಣ ಪತ್ರವನ್ನು ಅಪ್‌ಲೋಡ್‌ ಮಾಡಿರುವ ಉಪೇಂದ್ರ, ‘ಪ್ರಾಣಿಗಳೇ ಗುಣದಲಿ ಮೇಲು. ನನ್ನ ಮೆಚ್ಚಿನ ಚಾಲೆಂಜಿಂಗ್ ಸ್ಟಾರ್ ದರ್ಶನ್‌ರವರ ಕರೆಯಂತೆ ಮೈಸೂರಿನ ಶ್ರೀ ಜಯಚಾಮರಾಜೇಂದ್ರ ಮೃಗಾಲಯದಿಂದ ಆಫ್ರಿಕನ್ ಆನೆ ಒಂದನ್ನು ದತ್ತು ಪಡೆದು, ಈ ಮೂಲಕ ದರ್ಶನ್‌ರವರ ಮಹತ್ಕಾರ್ಯಕ್ಕೆ ಕೈಜೋಡಿಸಿದ್ದೇವೆ’ ಎಂದು ಉಲ್ಲೇಖಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next